ಕಾಗವಾಡ ಮಂಡಲ ಬಿಎಲ್ಎ-2 ಕಾರ್ಯಗಾರ ಸಂಪನ್ನ
Kagawad Mandal BLA-2 workshop completed
ಕಾಗವಾಡ, 11 : ಮಂಡಲದ ಬಿಎಲ್ಎ-2 ಗಳ ಕಾರ್ಯಗಾರವು ತಾಲೂಕಿನ ಕೆಂಪವಾಡದ ಕಾರ್ಖಾನೆಯ ಕೇಂದ್ರ ಕಛೇರಿಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ನೇತೃತ್ವದಲ್ಲಿ ಸೋಮವಾರ ದಿ. 10 ರಂದು ಸಂಜೆ ಸಂಪನ್ನಗೊಂಡಿತು. ಕಾರ್ಯಗಾರದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ ಮಾಹಿತಿ ನೀಡಿದರು. ಈ ಸಭೆಯಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜೀಗೋಳ, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷ ಅರುಣಕುಮಾರ ಗಣೇಶವಾಡಿ, ಮಾಜಿ ಜಿ.ಪಂ. ಸದಸ್ಯ ಅಪ್ಪಾಸಾಬ ಅವತಾಡೆ, ಕಾಗವಾಡ ಮಂಡಲದ ಬಿಎಲ್ಎ-1 ಪ್ರಮುಖ ಪ್ರವೀಣ ಕೆಂಪವಾಡೆ, ಮಾಜಿ ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ ಸೇರಿದಂತೆ ಹಲವಾರು ಮುಖಂಡರು, ಕಾಗವಾಡ ಮಂಡಲದ ಬಿಎಲ್ಎ-2 ಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 