ಕಾಗವಾಡ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಇಬ್ಬರು ಮನೆಗಳ್ಳರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
Kagawada police arrest two house robbers in massive operation, seize gold ornaments worth lakhs
ಕಾಗವಾಡ 19: ಬಂಗಾರದ ಆಭರಣಗಳು ಕಳ್ಳತನವಾಗಿರುವ ಬಗ್ಗೆ ದಾಖಲಾದ ಪ್ರಕರಣದ ತನಿಖೆ ನಡೆಸಿದ ಕಾಗವಾಡ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಫೆಬ್ರುವರಿ 10 ರಂದು ತಾಲೂಕಿನ ಉಗಾರ ಖುರ್ದ ಪಟ್ಟಣದ ಜಿನ್ನಪ್ಪಾ ಶ್ರೀಪಾಲ ಮಾಕನ್ನವರ ಎಂಬುವರು ಕಾಗವಾಡ ಠಾಣೆಗೆ ಹಾಜರಾಗಿ ತಮ್ಮ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು.
ಮನೆಯ ಕೊಂಡಿಯನ್ನು ಮುರಿದು ಮನೆಯೊಳಗೆ ನುಗ್ಗಿ ಟ್ರೇಜರಿಗಳಲ್ಲಿ ಇಟ್ಟಿದ 172 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 410 ಗ್ರಾಂ ತೂಕದ ಬೆಳ್ಳಿಯ ಆಭರಣ, 12,000 ರೂ. ಬೆಲೆಯ ಡೈಮೆಂಡ ಉಂಗುರ ಹಾಗೂ 25,000 ರೂ. ನಗದು ಹೀಗೆ ಒಟ್ಟು 22,03,500 ರೂ. ಬೆಲೆಯ ಆಭರಣ ಹಾಗೂ ಹಣವನ್ನು ಕಳ್ಳತನವಾಗಿದೆ ಎಂದು ದೂರು ನೀಡಿದ್ದರು.
ಕಾಗವಾಡ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 45/2026 ಕಲಂ: 331(3) 33(4) 305 ಬಿಎನ್ಎಸ್-2023 ನೇದ್ದರಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಗಳಾದ ಯಾಸೀನ ನಬೀಸಾಬ ಸುತಾರ (29) ಹಾಗೂ ಜಮೀರ ಶೌಖತಅಲಿ ಜಮಾದಾರ (37) ಇವರನ್ನು ಬಂಧಿಸಿ ಅವರಿಂದ 17,19,240 ಬೆಲೆಯ 143.27 ಗ್ರಾಂ. ತೂಕದ ಬಂಗಾರದ ಆಭರಣಗಳು.
2,14,610 ಬೆಲೆಯ 858.44 ಗ್ರಾಂ ತೂಕದ ಬೆಳ್ಳಿಯ ಆಭರಣಗಳು. 25,000 ಬೆಲೆಯ ಬೈಕ್. ಹೀಗೆ ಒಟ್ಟು 19,58,850 ರೂ ಬೆಲೆಯ ಬಂಗಾರದ, ಬೆಳ್ಳಿಯ ಹಾಗೂ ಬೈಕ್ ವಶಪಡಿಸಲಾಗಿದೆ. ಸಧ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 