ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಕಳಸಾರೋಹಣ
Kalasarohana at the branch of Kaginele Kanaka Gurupeeth
ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಕಳಸಾರೋಹಣ
ಹೂವಿನಹಡಗಲಿ 04:ತಾಲೂಕಿನ ಐತಿಹಾಸಿಕ ಕ್ಷೇತ್ರ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿಯ ಜಾತೋತ್ಸವದ ಅಂಗವಾಗಿ ಕಾಗಿನಲೆ ಕನಕ ಗುರುಪೀಠದ ಶಾಖಾಮಠವಾದ ಮೈಲಾರಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಮತ್ತು ಮಂಗಳವಾರ ಜರುಗಿದವು.ಸೋಮವಾರದಂದು ಗಣೇಶ ಪೂಜೆಯೊಂದಿಗೆ ವಿವಿಧ ಹೋಮಗಳು ಜರುಗಿದವು.
ಮಂಗಳವಾರ ಬೆಳಗಿನ ಜಾವದಿಂದಲೇ ಸ್ವಾಮಿಗೆ ವಿಶೇಷ ಪೂಜೆಗಳು ಜರುಗುವ ಮೂಲಕ ಕಲಾಸಾನಿಧ್ಯಹೋಮ, ಶ್ರೀಮಠ ಸೋಮಸಿದ್ದೇಶ್ವರ ಸ್ವಾಮಿಗೆ ರುದಾಭಿಷೇಕ ನಂತರ ಕಳಸಾರೋಹಣ ಹಾಗೂ ಕುಂಬಾಭಿಷೇಕ ಜರುಗಿದವು.ಹೋಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ. ಮೈಲಾರಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ಪ್ರಮೋದ್ಭಟ್. ಶಾಸಕ ಕೃಷ್ಣನಾಯ್ಕ. ಮಾಜಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ. ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬೀರ್ಪ, ಕುರುಬ ಸಮಾಜದ ಮುಖಂಡರಾದ. ಕೆ.ಪ್ರಕಾಶ, ರಾಮಸ್ವಾಮಿ ವೆಂಕಣ್ಣ, ಹನುಮಂತಪ್ಪ, ಪರಮೇಶಪ್ಪ, ಗುರುವಿನ ರಾಜು. ಈಟಿ.ಲಿಂಗರಾಜ, ಈಟಿ.ಮಾಲತೇಶ, ಮಲ್ಲಿಕಾರ್ಜುನ ಹಾಗೂ ಇತರರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 