ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಕಳಸಾರೋಹಣ
Kalasarohana at the branch of Kaginele Kanaka Gurupeeth
ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಕಳಸಾರೋಹಣ
ಹೂವಿನಹಡಗಲಿ 04:ತಾಲೂಕಿನ ಐತಿಹಾಸಿಕ ಕ್ಷೇತ್ರ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿಯ ಜಾತೋತ್ಸವದ ಅಂಗವಾಗಿ ಕಾಗಿನಲೆ ಕನಕ ಗುರುಪೀಠದ ಶಾಖಾಮಠವಾದ ಮೈಲಾರಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಮತ್ತು ಮಂಗಳವಾರ ಜರುಗಿದವು.ಸೋಮವಾರದಂದು ಗಣೇಶ ಪೂಜೆಯೊಂದಿಗೆ ವಿವಿಧ ಹೋಮಗಳು ಜರುಗಿದವು.
ಮಂಗಳವಾರ ಬೆಳಗಿನ ಜಾವದಿಂದಲೇ ಸ್ವಾಮಿಗೆ ವಿಶೇಷ ಪೂಜೆಗಳು ಜರುಗುವ ಮೂಲಕ ಕಲಾಸಾನಿಧ್ಯಹೋಮ, ಶ್ರೀಮಠ ಸೋಮಸಿದ್ದೇಶ್ವರ ಸ್ವಾಮಿಗೆ ರುದಾಭಿಷೇಕ ನಂತರ ಕಳಸಾರೋಹಣ ಹಾಗೂ ಕುಂಬಾಭಿಷೇಕ ಜರುಗಿದವು.ಹೋಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ. ಮೈಲಾರಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ಪ್ರಮೋದ್ಭಟ್. ಶಾಸಕ ಕೃಷ್ಣನಾಯ್ಕ. ಮಾಜಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ. ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬೀರ್ಪ, ಕುರುಬ ಸಮಾಜದ ಮುಖಂಡರಾದ. ಕೆ.ಪ್ರಕಾಶ, ರಾಮಸ್ವಾಮಿ ವೆಂಕಣ್ಣ, ಹನುಮಂತಪ್ಪ, ಪರಮೇಶಪ್ಪ, ಗುರುವಿನ ರಾಜು. ಈಟಿ.ಲಿಂಗರಾಜ, ಈಟಿ.ಮಾಲತೇಶ, ಮಲ್ಲಿಕಾರ್ಜುನ ಹಾಗೂ ಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 