ದಾಸ ಸಾಹಿತ್ಯದಲ್ಲಿ ಕನಕದಾಸರಿಗೆೆ ಶ್ರೇಷ್ಠ ಸ್ಥಾನವಿದೆ: ಅಳಗುಂಡಿ

  ದಾಸ ಸಾಹಿತ್ಯದಲ್ಲಿ ಕನಕದಾಸರಿಗೆೆ ಶ್ರೇಷ್ಠ ಸ್ಥಾನವಿದೆ: ಅಳಗುಂಡಿ Kanaka Dasari ta okupá un gran lugá den literatura di Dasa: Alagundi

ಬೆಟಗೇರಿ 08: ಕನಕದಾಸರು ಮತ್ತು ಪುರದಂರದಾಸರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳಿದ್ದಂತೆ, ದಾಸ ಸಾಹಿತ್ಯದಲ್ಲಿ ಕನಕದಾಸರಿಗೆೆ ಶ್ರೇಷ್ಠ ಸ್ಥಾನವಿದೆ ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.   

   ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ​‍್ಾರೆ್ಪನ ನೆರವೇರಿಸಿದ ಬಳಿಕ ಮಾತನಾಡಿ, ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದರು.   ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮುಖ್ಯಅತಿಥಿಗಳಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಶಾಲೆಯ ವಿದ್ಯಾರ್ಥಿಗಳನ್ನು ಈ ವೇಳೆ ಸತ್ಕರಿಸಿದರು. 

  ಈರಣ್ಣ ಪಟಗುಂದಿ, ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಈಶ್ವರ ಮುನವಳ್ಳಿ,  ವಾಯ್‌.ಎಮ್‌.ವಗ್ಗರ, ಮಲ್ಹಾರಿ ಪೋಳ, ಬಸವರಾಜ ಭೋಸಲೆ, ಸವಿತಾ ಜೋಗಿ, ಆನಂದ ಬಡಿಗೇರ, ಮಂಜುನಾಥ ಸವತಿಕಾಯಿ, ನಾಗರಾಜ ಅರಳಿಮಟ್ಟಿ, ಕಿರಣ ಕಮತ, ಸಿರಾಜಅಹ್ಮದ ಜಿಡ್ಡಿಮನಿ, ಎಸ್‌ಡಿಎಮ್‌ಸಿ  ಸದಸ್ಯರು, ಎನ್‌.ಟಿ.ಪೂಜೇರಿ, ಹನುಮಂತ ಹಾಲಣ್ಣವರ, ದುಂಡಪ್ಪ ದೇಯಣ್ಣವರ, ಸ್ಥಳೀಯರು, ಶಿಕ್ಷಕರು, ಅತಿಥಿಶಿಕ್ಷಕರು, ವಿದ್ಯಾರ್ಥಿಗಳು, ಇದ್ದರು.