ಕನಕದಾಸರ ಜಯಂತ್ಯೋತ್ಸವ
Kanakadasa Jayanti
ಯರಗಟ್ಟಿ 08: ಸೋಮವಾರದ ದಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಭಕ್ತ ಕನಕದಾಸ ಜಯಂತ್ಯೋತ್ಸವ ಸಮೀತಿಯಿಂದ 538ನೇ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಶಂಕರ ಇಟ್ನಾಳ ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.ಸೋಮವಾರ ಬೆಳಗ್ಗೆ 10-00 ಗಂಟೆಗೆ ಭಕ್ತ ಕನಕದಾಸಲ ಮೂರ್ತಿ ಭವ್ಯ ಮೆರವಣಿಗೆಯು ಡೋಳ್ಳು ಕುಣಿತ, ಗೊಂಬೆ ಕುಣಿತ, ಕರಡಿ ಮಜಲು, ಹಾಗೂ ಡೊಳ್ಳಿನ ವಾಲಗದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿಸು ಹಾಗೂ ಸಂಜೆ 05-00 ಗಂಟೆಗೆ ಸಂಗೀತ ಸಂಜೆ ಕಾರ್ಯಕ್ರಮ ಜರುಗುವುದು ಎಂದು ಹೇಳಿದರು.ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಸವದತ್ತಿ ಬ್ರಹ್ಮಾನಂದ ಆಶ್ರಮದ ಶಿವಾನಂದ ಮಹಾಸ್ವಾಮಿಗಳ, ರಾಜರಾಜೇಶ್ವರಿ ಆಶ್ರಯದ ಗಣಪತಿ ಮಹಾರಾಜರು, ಮುಗಳಿಹಾಳದ ದೇವರಿಷಿ ಲಕ್ಷ್ಮಣ ಅಜ್ಜನವರು, ಬಿಡಕಿ ಶಿವಾನಂದ ಮಠದ ಗಂಗಾಧರ ಮಹಾಸ್ವಾಮಿಗಳು, ಉದ್ಘಾಟಕರಾಗಿ ಶಾಸಕ ವಿಶ್ವಾಸ ವೈದ್ಯ, ಜ್ಯೋತಿ ಬೆಳಗಿಸುವವರು ಕುರುಬ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ, ಕೆಎಂಎಫ್ ನಿರ್ದೇಶಕ ಅಜೀತಕುಮಾರ ದೇಸಾಯಿ, ಕುರುಬ ಸಂಘದ ಮಡ್ಡೆಪ್ಪ ತೊಳನವರ, ಮಾಜಿ ಪ್ರಧಾನರಾದ ನಿಖಿಲ ದೇಸಾಯಿ, ಕುರುಬ ಸಂಘದ ಕಾರ್ಯದರ್ಶಿಯಾದ ಬಸವರಾಜ ಬಸಲಿಗುಂದಿ, ಅತಿಥಿ ಉಪನ್ಯಾಸಕರಾಗಿ ಬಾ. ವಾಯ್. ಎಮ್. ಯಾಕೋಳ್ಳಿ ಮುಖ್ಯ ಅತಿಥಿಗಳಾಗಿ ಡಿ ಡಿ ಟೋಪೋಜಿ, ಜಿ ಜಿ ಕಣವಿ, ಎಸ್. ಎಫ್. ಕಣವಿ, ಪಂಚಪ್ಪ ಮಲ್ಲಾಡ, ಮಲ್ಲಿಕಸಾಬ ಬಾಗವಾನ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ ವಿಠ್ಠಲ ಬಂಟನೂರ ಸೇರಿದಂತೆ ಅನೇಕ ಗಣ್ಯರು ಆಗಮಿಸಲ್ಲಿದ್ದಾರೆ ಎಂದು ತಿಳಿಸಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 