ಚಿಕ್ಕೋಡಿಯಲ್ಲಿ ಕನಕದಾಸರ ಜಯಂತಿ ಅದ್ದೂರಿಯಾಗಿ ಆಚರಣೆ
Kanakadasa Jayanti selebrá ku grandesa na Chikkodi
ಚಿಕ್ಕೋಡಿ, 08 : ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ಸಂತ ಶ್ರೇಷ್ಠ ಕನಕದಾಸರವರ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆಸಲಾಗಿದ್ದು, ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ ರಾಜೇಶ ಬುರ್ಲಿ, ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ಸೇರಿದಂತೆ ಗಣ್ಯರು ಕನಕದಾಸರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ,“ಜಿಲ್ಲಾ ಕೇಂದ್ರವಾಗಲು ತುದಿಗಾಲ ಮೇಲೆ ನಿಂತಿರುವ ಚಿಕ್ಕೋಡಿ ಪಟ್ಟಣದಲ್ಲಿ ಭವ್ಯವಾದ ಕನಕ ಭವನ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈ ಉದ್ದೇಶಕ್ಕಾಗಿ ವಿಶೇಷ ಅನುದಾನ ಒದಗಿಸಲಾಗುತ್ತದೆ,” ಎಂದು ತಿಳಿಸಿದರು.ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಅವರು ಮಾತನಾಡಿ, ಕನಕದಾಸರು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ನೀಡಿದ ಮಹಾನ್ ಸಂತರು. ಅವರ ಕೀರ್ತನೆಗಳು ಇಂದು ಕೂಡ ಸಾಂಸ್ಕೃತಿಕ ಹಾಗೂ ನೈತಿಕ ಮಾರ್ಗದರ್ಶನ ನೀಡುತ್ತಿವೆ. ಯುವಕರು ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕುರುಬರ ಸಂಘದ ಅಧ್ಯಕ್ಷ ಲಕ್ಷ್ಮಣ ಡಂಗೇರ, ಮುಖಂಡರಾದ ಸಿದ್ದಪ್ಪ ಮರ್ಯಾಯಿ, ಎಚ್.ಎಸ್. ನಸಲಾಪೂರೆ, ಮಾಳು ಕೋರೆ, ಸುರೇಶ ಬಾಡಕರ, ರಾಮಾ ಕಟ್ಟಿಕಾರ, ಸುರೇಶ ಕಟ್ಟಿಕರ, ವಿಠ್ಠಲ ವಾಳಕೆ, ರಾಮಣ್ಣಾ ಬನ್ನಟಿ, ಸುರೇಶ ಹೆಗಡೆ, ಶಿವಾನಂದ ಮರ್ಯಾಯಿ, ಮಾರುತಿ ಹರಕೆ, ನಿಂಗರಾಜ ಹರಕೆ, ಚಂದ್ರಕಾಂತ ಪೂಜೇರಿ, ಎಂ.ಕೆ. ಪೂಜಾರಿ, ಲಕ್ಷ್ಮಣ ಪೂಜೇರಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 