ಕನ್ನಡ ಹಬ್ಬ “ಐಸಿರಿ-2025” ಕಾರ್ಯಕ್ರಮ
Kannada festival “ICRI-2025” programme
ಕನ್ನಡ ಹಬ್ಬ “ಐಸಿರಿ-2025” ಕಾರ್ಯಕ್ರಮ
ಚಿಕ್ಕೋಡಿ, 23 : ಕನ್ನಡ ಭಾಷೆಗೆ ಎರಡೂ ಸಾವಿರ ವರ್ಷಗಳ ಹಿಂದಿನ ಇತಿಹಾಸವಿದೆ. ಅಂತಹ ಕನ್ನಡ ನಾಡಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಕನ್ನಡ ನಾಡಿಗೆ ಕಳಶ ಪ್ರಾಯವಾಗಿದೆ. ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ನೆಲ, ಜಲ ಉಳಿಸಲು ಪ್ರತಿಯೊಬ್ಬ ಕನ್ನಡಿಗರು ಕೈ ಜೋಡಿಸಬೇಕೆಂದು ಕೆ.ಎಲ್.ಇ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ಪ್ರಸಾದ ರಾಂಪೂರೆ ಅಭಿವ್ಯಕ್ತಪಡಿಸಿದರು. ಇಲ್ಲಿನ ಕೆ.ಎಲ್.ಇ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಕನ್ನಡ ಬಳಗದಿಂದ ಆಯೋಜಿಸಿದ ಕನ್ನಡ ಹಬ್ಬ “ಐಸಿರಿ-2025” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾವಿರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಭರತ ಕಲಾಚಂದ್ರ ಇವರು ಆರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಐಸಿರಿ-2025 ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ಬದುಕು ಕಟ್ಟಿ ಕೊಳ್ಳಲು ಶಿಕ್ಷಣದಲ್ಲಿ ಹತ್ತು ಹಲವಾರು ಭಾಷೆಗಳನ್ನು ಕಲಿಯಬಹುದು. ಆದರೆ, ಜನ್ಮ ಕೊಟ್ಟ ನಮ್ಮ ನಾಡಿನ ಋಣ ತಿರಿಸಲು ನಮ್ಮ ಮನೆಯ ಭಾಷೆ ಕನ್ನಡಮಯವಾಗಿರಬೇಕು. ನಮ್ಮ ಕಲೆ ಮತ್ತು ಸಂಸ್ಕೃತಿ ನಮ್ಮ ಜೀವನಕ್ಕೆ ದಾರೀದೀಪವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ನಿಷ್ಠೆಯಿಂದ ಕಲಿತು ಉಜ್ವಲ ಭವಿಷ್ಯದ ಗುರಿ ಸಾಧನೆ ಮಾಡಬೇಕೆಂದರು.
ಕಾರ್ಯಕ್ರಮದ ಅಂಗವಾಗಿ ಕನ್ನಡ ನಾಡು ಸಂಸ್ಕೃತಿ ಬಿಂಬಿಸುವ ರಸಪ್ರಶ್ನೆ, ಗಾಯನ, ಭಾಷಣ ಮುಂತಾದ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಪ್ರಮಾಣಪತ್ರ ಮೆಡಲ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕಾರದ ಡಾ. ಕುಮಾರ ಚೌಗಲಾ, ಡಾ. ಸಂಜಯ ಪೂಜೇರಿ, ಡಾ. ಮಹಾಂತಯ್ಯ ಮಠಪತಿ, ಡಾ. ಸಂಜಯ ಅಂಕಲಿ, ಸಂಗೀತಾ ವಾಟೆಗಾಂವಕರ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಸಂಗಮೇಶ ಬಬಲೇಶ್ವರ ಉಪಸ್ಥಿತರಿದ್ದರು. ಆಶಾದೀಪ ಕಲಾಕೇಂದ್ರದ ಕಲಾವಿದರು ಕನ್ನಡಪರ ಗೀತಗಾಯನ ಪ್ರಸ್ತುತ ಪಡಿಸಿದರು.
ಡಾ. ಸಚೀನ ಮೆಕ್ಕಳಕಿ ಅತಿಥಿ ಪರಿಚಯ ಮಾಡಿದರು. ಸಂಜನಾ ಹಾಗೂ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು. ಡಾ. ಬಾಹುಬಲಿ ಅಕ್ಕಿವಾಟೆ ಸ್ವಾಗತಿಸಿದರು. ವಿದ್ಯಾರ್ಥಿ ಪ್ರತಿನಿಧಿ ಸ್ನೇಹಾ ಶಿರಹಟ್ಟಿ ವಂದಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಮಜರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 