ಕನ್ನಡ ಹಬ್ಬ “ಐಸಿರಿ-2025” ಕಾರ್ಯಕ್ರಮ
Kannada festival “ICRI-2025” programme
ಕನ್ನಡ ಹಬ್ಬ “ಐಸಿರಿ-2025” ಕಾರ್ಯಕ್ರಮ
ಚಿಕ್ಕೋಡಿ, 23 : ಕನ್ನಡ ಭಾಷೆಗೆ ಎರಡೂ ಸಾವಿರ ವರ್ಷಗಳ ಹಿಂದಿನ ಇತಿಹಾಸವಿದೆ. ಅಂತಹ ಕನ್ನಡ ನಾಡಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಕನ್ನಡ ನಾಡಿಗೆ ಕಳಶ ಪ್ರಾಯವಾಗಿದೆ. ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ನೆಲ, ಜಲ ಉಳಿಸಲು ಪ್ರತಿಯೊಬ್ಬ ಕನ್ನಡಿಗರು ಕೈ ಜೋಡಿಸಬೇಕೆಂದು ಕೆ.ಎಲ್.ಇ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ಪ್ರಸಾದ ರಾಂಪೂರೆ ಅಭಿವ್ಯಕ್ತಪಡಿಸಿದರು. ಇಲ್ಲಿನ ಕೆ.ಎಲ್.ಇ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಕನ್ನಡ ಬಳಗದಿಂದ ಆಯೋಜಿಸಿದ ಕನ್ನಡ ಹಬ್ಬ “ಐಸಿರಿ-2025” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾವಿರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಭರತ ಕಲಾಚಂದ್ರ ಇವರು ಆರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಐಸಿರಿ-2025 ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ಬದುಕು ಕಟ್ಟಿ ಕೊಳ್ಳಲು ಶಿಕ್ಷಣದಲ್ಲಿ ಹತ್ತು ಹಲವಾರು ಭಾಷೆಗಳನ್ನು ಕಲಿಯಬಹುದು. ಆದರೆ, ಜನ್ಮ ಕೊಟ್ಟ ನಮ್ಮ ನಾಡಿನ ಋಣ ತಿರಿಸಲು ನಮ್ಮ ಮನೆಯ ಭಾಷೆ ಕನ್ನಡಮಯವಾಗಿರಬೇಕು. ನಮ್ಮ ಕಲೆ ಮತ್ತು ಸಂಸ್ಕೃತಿ ನಮ್ಮ ಜೀವನಕ್ಕೆ ದಾರೀದೀಪವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ನಿಷ್ಠೆಯಿಂದ ಕಲಿತು ಉಜ್ವಲ ಭವಿಷ್ಯದ ಗುರಿ ಸಾಧನೆ ಮಾಡಬೇಕೆಂದರು.
ಕಾರ್ಯಕ್ರಮದ ಅಂಗವಾಗಿ ಕನ್ನಡ ನಾಡು ಸಂಸ್ಕೃತಿ ಬಿಂಬಿಸುವ ರಸಪ್ರಶ್ನೆ, ಗಾಯನ, ಭಾಷಣ ಮುಂತಾದ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಪ್ರಮಾಣಪತ್ರ ಮೆಡಲ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕಾರದ ಡಾ. ಕುಮಾರ ಚೌಗಲಾ, ಡಾ. ಸಂಜಯ ಪೂಜೇರಿ, ಡಾ. ಮಹಾಂತಯ್ಯ ಮಠಪತಿ, ಡಾ. ಸಂಜಯ ಅಂಕಲಿ, ಸಂಗೀತಾ ವಾಟೆಗಾಂವಕರ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಸಂಗಮೇಶ ಬಬಲೇಶ್ವರ ಉಪಸ್ಥಿತರಿದ್ದರು. ಆಶಾದೀಪ ಕಲಾಕೇಂದ್ರದ ಕಲಾವಿದರು ಕನ್ನಡಪರ ಗೀತಗಾಯನ ಪ್ರಸ್ತುತ ಪಡಿಸಿದರು.
ಡಾ. ಸಚೀನ ಮೆಕ್ಕಳಕಿ ಅತಿಥಿ ಪರಿಚಯ ಮಾಡಿದರು. ಸಂಜನಾ ಹಾಗೂ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು. ಡಾ. ಬಾಹುಬಲಿ ಅಕ್ಕಿವಾಟೆ ಸ್ವಾಗತಿಸಿದರು. ವಿದ್ಯಾರ್ಥಿ ಪ್ರತಿನಿಧಿ ಸ್ನೇಹಾ ಶಿರಹಟ್ಟಿ ವಂದಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಮಜರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 