ಕಂಪ್ಲಿ: ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ
ಲೋಕದರ್ಶನ ವರದಿ
ಕಂಪ್ಲಿ 05: ತಾಲೂಕಿನ ಚಿಕ್ಕಜಾಯಿಗನೂರು ಗ್ರಾಮದಲ್ಲಿ, ಬಳ್ಳಾರಿಯ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ರಾಜ್ ಇಂಜನಿಯರಿಂಗ್ ಇಲಾಖೆ ವಿಭಾಗದ, 2018-19ನೇ ಸಾಲಿನ 3054ಲೆಕ್ಕ ಶೀಷರ್ಿಕೆಯ ಯೋಜನಡಿಯಲ್ಲಿ, 45ಲಕ್ಷ ರೂ.ಗಳ ಅನುದಾನದಲ್ಲಿ ಚಿಕ್ಕಜಾಯಿಗನೂರು ಗ್ರಾಮದಿಂದ ಸಕ್ಕರೆ ಕಾಖರ್ಾನೆವರೆಗೆ 5ಕಿ.ಮೀ. ದುರಸ್ತಿ, ನಿರ್ವಹಣೆ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ್ ಭೂಮಿ ಪೂಜೆ ನೆರವೇರಿಸಿ ನತಂರ ಮಾತನಾಡಿ, ಚಿಕ್ಕಜಾಯಿಗನೂರು ಗ್ರಾಮದಿಂದ ನೆಲ್ಲೂಡಿ ಗ್ರಾಮತನಕ, ಎಚ್ಕೆಆರ್ಡಿಬಿಯ 3ಕೋಟಿ ರೂ.ಗಳಲ್ಲಿ,ವೆಚ್ಚದಲ್ಲಿ. ರಸ್ತೆ ಅಭಿವೃದ್ದಿ ಕಾಮಗಾರಿಗೆ ಅತಿ ಶಿಘ್ರದಲ್ಲಿ ಭೂಮಿಪೂಜೆ ಮಾಡಲಾಗುವುದು ಎಂದು ಹೇಳಿದರು.
ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಇಟ್ಗಿ ಬಸವರಾಜಗೌಡ, ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬಂಗಿ ಮಲ್ಲಯ್ಯ ಅವರನ್ನು ನೇಮಕಮಾಡಲಾಗುವುದು ಎಂದರು
ಭೂಮಿ ಪೂಜೆ ಸಂದರ್ಭದಲ್ಲಿ ತಾಪಂ ಸದಸ್ಯ ಎಚ್.ಈರಣ್ಣ, ಮುಖಂಡರಾದ ಬಿ.ದುರುಗಪ್ಪ, ವಿ.ಹನುಮಪ್ಪ, ಕೆ.ಭೀಮಲಿಂಗ, ಆನಂದಗೌಡ, ಮೆಹಬೂಬ್ಸಾಬ್, ವಿ.ಹನುಮೇಶ್, ಆರ್.ರವಿಗೌಡ, ಜಿ.ಶಂಕರಗೌಡ, ಗುರುರಾಜ, ಗೋವಿಂದರಾಜು ಸೇರಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 