ರಕ್ಷಣೆ ಮತ್ತು ಜ್ಞಾಪಕ ಶಕ್ತಿ ವೃದ್ದಿಸಿಕೊಳ್ಳಲು ಕರಾಟೆ ಅವಶ್ಯ: ವೀರೇಂದ್ರ ಬಳಿಗಾರ
Karate is essential for protection and memory enhancement: Veerendra Baligar
ರಕ್ಷಣೆ ಮತ್ತು ಜ್ಞಾಪಕ ಶಕ್ತಿ ವೃದ್ದಿಸಿಕೊಳ್ಳಲು ಕರಾಟೆ ಅವಶ್ಯ: ವೀರೇಂದ್ರ ಬಳಿಗಾರ
ಶಿಗ್ಗಾವಿ 11: ಪ್ರಸ್ತುತ ದಿನಮಾನಗಳಲ್ಲಿ ತಮ್ಮ ವೈಯಕ್ತಿಕ ರಕ್ಷಣೆ ಮತ್ತು ಜ್ಞಾಪಕ ಶಕ್ತಿ ವೃದ್ದಿಸಿಕೊಳ್ಳಲು ಕರಾಟೆ ಬಹಳ ಅವಶ್ಯವಾಗಿದೆ ಎಂದು ಕರಾಟೆ ತರಬೇತುದಾರ ವಿರೇಂದ್ರ ಬಳಿಗಾರ ಹೇಳಿದರು. ಪಟ್ಟಣದಲ್ಲಿ ನಡೆದ ಹಾವೇರಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೇಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು ಕಳೆದ 35 ವರ್ಷಗಳಿಂದ ನಿರಂತರವಾಗಿ ಅಭ್ಯಾಸ ,ಸತತ ಪ್ರಯತ್ನ ಹಾಗೂ ಶ್ರಮದಿಂದ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದರು. ತರಬೇತುದಾರ ಹನುಮಂತ ಗದಗ ಮಾತನಾಡಿ ಮೊದಲಿಗೆ ಕರಾಟೆ ಬರೆ ಹುಡಾಳ ಹುಡುಗರು ಕಲಿಯುವದು ಅಂತ ಇತ್ತು ಆದರೆ ಈಗ ಆತ್ಮ ರಕ್ಷಣೆಗಾಗಿ ಯಾರು ಬೇಕಾದರೂ ಕರಾಟೆ ಕಲಿಯಬಹುದು ಎಂದರು. ತರಬೇತುದಾರ ಬಸವರಾಜ ಕುಲಕರ್ಣಿ ಮಾತನಾಡಿ ಅತಿ ಹೆಚ್ಚು ವಿದ್ಯಾರ್ಥಿಗಳು ಈ ಭಾರಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಅಲ್ಲಿ ಜಯಶಾಲಿಯಾಗಿ ದೇಶ ಮಟ್ಟ ಪ್ರತಿನಿಧಿಸಿ ಶಿಗ್ಗಾವಿ ತಾಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದರು. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿಗಳು ಸೂರಜ್ ಹೂಗಾರ, ನವಲಗುಂದ, ಅರುಣ ಅಣ್ಣಿಗೇರಿ, ಹಸನ ಮುಂದಿನಮನಿ, ಅಮೋಘ ಕಲಾಲ, ಜೀವನ ಮತ್ತೂರ, ಪ್ರವೀಣ ಗದಗ, ಗೀರೀಶ ಗದಗ ಆಯ್ಕೆ ಆಗಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಗೌಸಖಾನ ಮುನಶಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 