ಕರ್ನಾಟಕ ಬ್ಯಾಂಕ್ನ 984ನೇ ಶಾಖೆ ಉದ್ಘಾಟನೆ: ಶಾಸಕ ವಿಶ್ವಾಸ ವೈದ್ಯ
Karnataka Bank's 984th branch inaugurated: MLA Vishwas Vaidya
ಸವದತ್ತಿ 31: ನಗರದ ಜನತೆಗೆ ಸುಸಜ್ಜಿತ ಹಾಗೂ ಆಧುನಿಕ ಬ್ಯಾಂಕಿಂಗ್ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ತನ್ನ ಹೆಜ್ಜೆಯನ್ನು ಸವದತ್ತಿಯಲ್ಲಿಯೂ ಇರಿಸಿದೆ. ನಗರದ ಎಸ್.ಎಲ್.ಎ.ಓ. ಕ್ರಾಸ್ ಹತ್ತಿರದ ಹಂಪಣ್ಣವರ ಕಾಂಪ್ಲೆಕ್ಸ್ನಲ್ಲಿ ಕರ್ನಾಟಕ ಬ್ಯಾಂಕ್ನ 984ನೇ ಶಾಖೆ ಹಾಗೂ ಮಿನಿ ಇ-ಲಾಬಿಯನ್ನು ಶಾಸಕ ವಿಶ್ವಾಸ ವೈದ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಮಂಗಳವಾರ ರಂದು ಉದ್ಘಾಟಿಸಿದರು.ಬಳಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸವದತ್ತಿ ನಗರಕ್ಕೆ ಕರ್ನಾಟಕ ಬ್ಯಾಂಕ್ನಂತಹ ಪ್ರತಿಷ್ಠಿತ ಸಂಸ್ಥೆಯ ಆಗಮನವಾಗಿರುವುದು ಹರ್ಷದಾಯಕ ವಿಷಯವಾಗಿದೆ. ಬ್ಯಾಂಕಿಂಗ್ ಕ್ಷೇತ್ರವು ಡಿಜಿಟಲ್ ರೂಪದಲ್ಲಿ ಕ್ರಾಂತಿ ಮಾಡುತ್ತಿದ್ದು, ಇಲ್ಲಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಹಾಗೂ ವಿಶೇಷವಾಗಿ ರೈತರಿಗೆ ಈ ನೂತನ ಶಾಖೆಯು ಸುಧಾರಿತ ತಂತ್ರಜ್ಞಾನದೊಂದಿಗೆ ಉತ್ತಮ ಆರ್ಥಿಕ ಸೇವೆಗಳನ್ನು ನೀಡಲಿ,ಎಂದು ಹೇಳಿದರು.
ಈ ಸಂದರ್ಭದಲ್ಲಿ ದಿವ್ಯ ಸಾನ್ನಿಧ್ಯ ಪರಮ ಪೂಜ್ಯ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಬ್ಯಾಂಕುಗಳು ಕೇವಲ ವ್ಯವಹಾರ ಕೇಂದ್ರಗಳಾಗದೆ ಜನರ ಆರ್ಥಿಕ ಅಭಿವೃದ್ಧಿಯ ಶಕ್ತಿಯಾಗಲಿ ಎಂದು ಶುಭ ಹಾರೈಸಿದರು.ಕರ್ನಾಟಕ ಬ್ಯಾಂಕಿನ ಎ.ಜಿ.ಎಮ್. ಈರಣ್ಣ ನಾಗರಾಳ ಅವರು ಬ್ಯಾಂಕಿನ ಸೌಲಭ್ಯಗಳ ಕುರಿತು ಮಾಹಿತಿ ಹಂಚಿಕೊಂಡರು. ಸವದತ್ತಿಯ ಶಾಖೆಯು ಬ್ಯಾಂಕಿನ ಒಟ್ಟು ಜಾಲದ 984ನೇ ಮೈಲಿಗಲ್ಲಾಗಿದ್ದು, ಮಿನಿ ಇ - ಲಾಬಿಯ ಸೌಲಭ್ಯವನ್ನೂ ಒಳಗೊಂಡಿದೆ ಹೇಳಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ನಗರಸಭೆ ಪೌರಾಯುಕ್ತ ಸಂಗನಬಸಯ್ಯ,ರಾಜೇಂದ್ರ ಹಂಪಣ್ಣವರ,ಬಸವರಾಜ ಕಾರದಗಿ, ಸ್ಥಳೀಯ ಗಣ್ಯರು, ಬ್ಯಾಂಕಿನ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 