ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ
Karnataka State Government Employees Sports Meet kicks off
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಹೊಸಪೇಟೆ 09: ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಭಾ.ಆ.ಸೇ., ಇವರು ಹಾಗೂ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ಭಾ.ಆ.ಸೇ., ರವರು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ-2025ನ್ನು ಎ. 09ರಂದು ಉದ್ಘಾಟಿಸಿದರು.
ಕ್ರೀಡಾ ಜ್ಯೋತಿ, ಕ್ರೀಡಾ ಧ್ವಜಾರೋಹಣವನ್ನು ಹಾಗೂ ಧ್ವಜವಂದನೆ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸರ್ಕಾರ ನೌಕರರ ಕ್ರೀಡಾಕೂಟಕ್ಕೆ ಶುಭ ಹಾರೈಸಿ ಬಿರು ಬಿಸಿಲಿನಲ್ಲಿ ಎಚ್ಚರಿಕೆಯಿಂದ ಆಟವಾಡಲು ತಿಳಿಸಿದರು. ಸ್ವತಃ ಕ್ರೀಡಾಪಟುಗಳಾದ ಜಿಲ್ಲಾ ಕಾರ್ಯವಣಾಧಿಕಾರಿಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಎಲ್ಲರೂ ತಮ್ಮ ಜೀವನದಲ್ಲಿ ಕ್ರೀಡೆಗೆ ಅತ್ಯುತ್ತಮವಾದ ಸ್ಥಾನವನ್ನು ನೀಡಬೇಕೆಂದು ತಿಳಿಸಿದರು.
ವಿಜಯನಗರ ಜಿಲ್ಲೆಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಜಿ. ಮಲ್ಲಿಕಾರ್ಜುನಗೌಡ, ರಾಜ್ಯ ಪರಿಷತ್ ಸದಸ್ಯರಾದ ರಾಘವೇಂದ್ರ, ಜಿಲ್ಲಾ ಖಜಾಂಚಿಗಳಾದ ಕೆ. ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಟಿ. ಪಂಪಣ್ಣ ಹಾಗೂ ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಯ ತಾಲೂಕುಗಳ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷರು ರಾಜ್ಯ ಪರಿಷತ್ ಸದಸ್ಯರು ಹಾಗೂ ಸರ್ವ ಪದಾಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಭಾಗದಿಂದ ನೌಕರರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 