ಅಂಧಕಾರ ಹೋಗಲಾಡಿಸಿ ಜ್ಞಾನದ ಬೆಳಕು ಹೊತ್ತಿಸುವುದೇ ಕಾರ್ತಿಕೋತ್ಸವ
Kartikotsava is about dispelling darkness and lighting the light of knowledge
ಅಂಧಕಾರ ಹೋಗಲಾಡಿಸಿ ಜ್ಞಾನದ ಬೆಳಕು ಹೊತ್ತಿಸುವುದೇ ಕಾರ್ತಿಕೋತ್ಸವ
ಹಾನಗಲ್ 19 :ಅಂಧಕಾರ ಹೋಗಲಾಡಿಸಿ ಜ್ಞಾನದ ಬೆಳಕು ಹೊತ್ತಿಸುವುದೇ ಕಾರ್ತಿಕೋತ್ಸವ. ದೀಪ ತಾನು ಉರಿದು ಜಗಕೆ ಬೆಳಕು ನೀಡುತ್ತದೆ. ಅದೇ ರೀತಿ ಮನುಷ್ಯ ಕಷ್ಟಗಳನ್ನೆಲ್ಲ ಎದುರಿಸಿ ಸಮಾಜದಲ್ಲಿ ಮುಂದೆ ಬರಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಯತ್ತಿನಹಳ್ಳಿ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ದಿನ ಕಳೆದಂತೆ ಸಮುದಾಯದಲ್ಲಿ ಧಾರ್ಮಿಕ ಮನೋಭಾವನೆ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರದ್ಧೆ, ಭಕ್ತಿಯಿಂದ ಭಾಗವಹಿಸುತ್ತಿರುವುದನ್ನು ಕಾಣಬಹುದಾಗಿದೆ. ಹಾಗಾಗಿಯೇ ಹಳ್ಳಿಗಳಲ್ಲಿ ಪರಸ್ಪರ ಬಾಂಧವ್ಯ, ಪ್ರೀತಿ, ವಿಶ್ವಾಸ ಹೆಚ್ಚಿದೆ ಎಂದು ಹೇಳಿದ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಜನತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರಕಾರ ನೆರವಿಗೆ ಧಾವಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಹಾನಗಲ್ ತಾಲೂಕಿಗೆ ವಾರ್ಷಿಕ 300 ಕೋಟಿ ರೂ. ಆರ್ಥಿಕ ನೆರವು ಸಿಗುತ್ತಿದೆ ಎಂದರು.
ಬಳಿಕ ಗ್ರಾಮಸ್ಥರ ಕುಂದು, ಕೊರತೆಗಳನ್ನು ಸಹ ಆಲಿಸಿದ ಶಾಸಕ ಮಾನೆ, ಸೂಕ್ತ ಪರಿಹಾರ ದೊರಕಿಸಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಸುರೇಶ ಡೊಮ್ಮನಾಳ, ಮಂಜು ತಳವಾರ, ಉಮೇಶ ತಳವಾರ, ಶಿವು ತಳವಾರ, ಗಣೇಶ ಯತ್ತಿನಹಳ್ಳಿ ಸೇರಿದಂತೆ ಅನೇಕರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 