ಕಸಾಪ ಸರ್ವಾಧ್ಯಕ್ಷೆ ಮಾಲಾ ಬಡಿಗೇರ್
Kasapa president Mala Badiger
ಕಸಾಪ ಸರ್ವಾಧ್ಯಕ್ಷೆ ಮಾಲಾ ಬಡಿಗೇರ್
ಕೊಪ್ಪಳ 05: ಹಲಗೇರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿರುವ ಕೊಪ್ಪಳ ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಕವಯಿತ್ರಿ ಸಾಹಿತಿ ಮಾಲಾ ಬಡಿಗೇರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕಾ, ಜಿಲ್ಲಾ ಘಟಕದಿಂದ ಅವರ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಸರ್ವಾಧ್ಯಕ್ಷರಾದ ಶರಣಪ್ಪ ಬಾಚಲಾಪೂರ ಅವರು ಮಾತನಾಡಿ ಮಾಲಾ ಬಡಿಗೇರ್ ಅವರ ಸಾಹಿತ್ಯ ಬಹು ಮೌಲ್ಯಯುತವಾಗಿವೆ. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕಸಾಪ ಕೊಪ್ಪಳ ತಾಲೂಕಾ ಘಟಕದ ಅಧ್ಯಕ್ಷರಾದ ರಾಮಚಂದ್ರಗೌಡ ಬಿ ಗೊಂಡಬಾಳ ಅವರು ಮಾತನಾಡಿ ಕೊಪ್ಪಳ ತಾಲೂಕಾ ಸಮ್ಮೇಳನಗಳ ಆಯೋಜನೆಯಲ್ಲಿ ಈ ಸಲ ಎರಡನೇ ಬಾರಿಗೆ ಮಹಿಳಾ ಲೇಖಕಿಯರಿಗೆ ಅವಕಾಶ ಒದಗಿ ಬಂದಿದೆ ಎಂದು ತಿಳಿಸಿದರು. ಅಲ್ಲಮಪ್ರಭು ಬೆಟ್ಟದೂರು, ಈಶ್ವರ ಹತ್ತಿ, ಶಿ. ಕಾ. ಬಡಿಗೇರ್, ರಮೇಶ ಕುಲಕರ್ಣಿ, ಮುಂತಾದವರು ಮಾತನಾಡಿದರು. ನಂತರ ಕಸಾಪದಿಂದ ಗೌರವ ಸನ್ಮಾನ ಮಾಡುವುದರೊಂದಿಗೆ ಆಹ್ವಾನ ನೀಡಲಾಯಿತು. ರಮೇಶ ತುಪ್ಪದ, ಸೋಮನಗೌಡ ಹೊರಗನಾಳ, ಮಾರುತೇಶ ಅಂಗಡಿ ಮಂಜುನಾಥ ಅಂಗಡಿ, ಮಲ್ಲಿಕಾರ್ಜುನ ಹ್ಯಾಟಿ, ಗೀರೀಶ್ ಪಾನಘಂಟಿ, ರಾಜೇಶ ಯಾವಗಲ್, ಅನಿಲ ಬಾಚನಹಳ್ಳಿ, ಹುಲುಗಪ್ಪ ಕಟ್ಟಿಮನಿ, ಚನ್ನಬಸಪ್ಪ ಕಡ್ಡಿಪುಡಿ, ಶೇಖರಗೌಡ ಮಾಲಿ ಪಾಟೀಲ್, ಶರಣು ಡೊಳ್ಳಿನ, ಗೀತಾ ಚಕ್ಕಡಿಮಠ, ದಾನಪ್ಪ ಕವಲೂರು, ಶಿವಪ್ರಸಾದ್ ಹಾದಿಮನಿ, ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿವಕುಮಾರ ಕುಕನೂರು ಅವರು ನಿರ್ವಹಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 