ಕಾಶ್ಮೀರ ಸಂಧಾನ ವಿಷಯ:ಭಾರತ ತಲೆಬಾಗಲು ಸಾಧ್ಯವಿಲ್ಲ-ಅಧೀರ್ ರಂಜನ್ ಚೌಧರಿ
ನವದೆಹಲಿ 23: ಕಾಶ್ಮೀರ ವಿವಾದದ ಬಗ್ಗೆ ಮಧ್ಯಸ್ಥಿಕೆ ವಹಿಸಲು ಸಿದ್ದ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಭಾರತ ಎಂದಿಗೂ ತಲೆಬಾಗಬಾರದು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಂಗಳವಾರ ಹೇಳಿದ್ದಾರೆ.
ಸದನದಲ್ಲಿ ಈ ವಿಷಯ ವಿಷಯವನ್ನು ಪ್ರಸ್ತಾಪ ಮಾಡಿದ ಅವರು ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಸ್ಪಷ್ಟಣೆ ನೀಡಬೇಕು ಎಂದು ಅವರು ಆಗ್ರಹಪಡಿಸಿದರು. ಕಾಶ್ಮಿರ ವಿಷಯ ದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದವಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ ವಿಷಯ ಸದಸದಲ್ಲಿ ಚಚರ್ೆಗೆ ಗ್ರಾಸವಾಗಿದೆ. ಅಮೆರಿಕ ಸೇರಿದಂತೆ ಯಾವುದೇ ಅಂತಾರಾಷ್ಟ್ರೀಯ ವೇದಿಕೆಗೂ ಅವಕಾಶ ಕೊಡಬಾರದು ಎಂದು ಅವರು ಹೇಳಿದರು.
ಭಾರತ ಅಥವಾ ಅಮೆರಿಕದ ಮುಂದೆ ಯಾವುದೇ ತಲೆಬಾಗಲು ಸಾಧ್ಯವಿಲ್ಲ ಎಂಬುದಾದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೂಡಲೇ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಭಾರತ"ದುರ್ಬಲ ದೇಶವಲ್ಲ" ಎಂದು ಹೇಳಿದರು ಅದರೂ ಸ್ಪೀಕರ್ ಓಂ ಬಿಲರ್ಾ ಅವರು ಈ ವಿಷಯವು ಗಂಭೀರವಾಗಿದ್ದು ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಲು ಸದಸ್ಯರಿಗೆ ಅವಕಾಶ ನೀಡುವುದಾಗಿ ಹೇಳಿದರು.
ಯಾವುದೇ ಸದಸ್ಯರು ಅಥವಾ ಪಕ್ಷವು ಇದರ ಬಗ್ಗೆ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಬಾರದು ಎಂದು ಅವರು ಹೇಳಿದರು. ಈ ಸಮಯದಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, "ಪ್ರತಿಪಕ್ಷದ ಸದಸ್ಯರು ಈ ವಿಷಯದ ಬಗ್ಗೆ ಚರ್ಚೆಗೆ ಕಾಳಜಿ ವಹಿಸಿದ್ದರೆ ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ಪ್ರಸ್ತಾಪ ಮಾಡಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 