ಕವಿರತ್ನ ಕಾಳಿದಾಸ ಕನ್ನಡ ಮಾಧ್ಯಮ ಪ್ರೌಢಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ
Kaviratna Kalidasa Kannada Medium High School Annual Friendship Conference
ರಾಯಬಾಗ 12 : ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಜ್ಞಾನದ ದೀಪ ಹಚ್ಚುವ ಜ್ಞಾನ ದೇಗುಲಗಳಾಗಬೇಕು ಎಂದು ಹಾರೂಗೇರಿಯ ಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಸಾಹಿತಿ ಟಿ ಎಸ್ ವಂಟಗೂಡಿ ಹೇಳಿದರು. ಗುರುವಾರ ತಾಲೂಕಿನ ಹಿಡಕಲ ಗ್ರಾಮದ ಕವಿರತ್ನ ಕಾಳಿದಾಸ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಬೀರೇಶ್ವರ ಪ್ರೌಢಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರಮಪಟ್ಟು ಕಾಯಕ ಮಾಡಿದರೆ ನಾಯಕರಾಗಲು ಸಾಧ್ಯ. ಕತ್ತಲಲ್ಲಿ ಬೆಳಕು ಎಷ್ಟು ಮುಖ್ಯವೋ ಜೀವನಕ್ಕೆ ಶಿಕ್ಷಣ ಕೂಡ ಅಷ್ಟೇ ಮುಖ್ಯ ಎಂದರು.
ಅಧ್ಯಕ್ಷತೆಯನ್ನು ಸಂಸ್ಥೆ ಅಧ್ಯಕ್ಷೆ ರೇಖಾ ಬೀಳಗಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ.ಎಮ್. ಮೆಣಸಿ, ಪಾಂಡುರಂಗ ಮೆಕ್ಕಳಕಿ, ರಾಘು ಸಿಂಪಿ, ಸವಿತಾ ಗಲಗಲಿ, ಸಿದ್ದಪ್ಪ ಅಲಕನೂರ, ಲಕ್ಷ್ಮೀ ಹೋಳ್ಕರ, ಸಂಜೀವ ಕಲಾಲ, ರೇವಪ್ಪ ಜೋಡಟ್ಟಿ, ಸುನಂದಾ ಬೀಳಗಿ, ಜ್ಞಾನದೇವ ಸಾಂಬರೆ, ಎಮ್. ಐ. ಪಾಟೀಲ, ಬೀರಸಿದ್ಧ ಬಿಳಗಿ, ಬಸವರಾಜ ಕಾಮಾನಿ, ಸಿದ್ದಪ್ಪ ಹೊಸಟ್ಟಿ ಹಾಗೂ ಶಿಕ್ಷಕ ಮತ್ತು ವಿದ್ಯಾರ್ಥಿಗಳು ಇದ್ದರು. ಪ್ರಧಾನ ಗುರುಗಳಾದ ಬೀರ್ಪ ತಡಸಲೂರ ಸ್ವಾಗತಿಸಿದರು, ಚುಟುಕು ಸಾಹಿತಿ ಡಿ. ಎಮ್. ಕೋಳಿ ನಿರೂಪಿಸಿದರು, ದೈಹಿಕ ಶಿಕ್ಷಕ ಎಮ್. ವಿ. ಆಂಟಿನ ವಂದಿಸಿದರು.ಫೋಟೊ: 12 ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಹಿಡಕಲ ಗ್ರಾಮದ ಕವಿರತ್ನ ಕಾಳಿದಾಸ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಬೀರೇಶ್ವರ ಪ್ರೌಢಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿರುವ ಸಾಹಿತಿ ಟಿ ಎಸ್ ವಂಟಗೂಡಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 