ಕಾಯಕ ಶರಣರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 10 : ಕಾಯಕ ಶರಣರ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗಪೆದ್ದಿಯವರ ಭಾವಚಿತ್ರಕ್ಕೆ ಫೆಬ್ರವರಿ 10 ರಂದು ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾಯಕ ಶರಣರ ಜಯಂತಿಯನ್ನು ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗಪೆದ್ದಿ ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಹಾಗೂ ಸಮಾಜದ ಮುಖಂಡರುಗಳಾದ ವೆಂಕಟೇಶ ಹೊಸಮನಿ, ರಾಮಣ್ಣ ಕಂದಾರಿ, ಸಿದ್ದಪ್ಪ ಕಲಾಲ್ ಬಂಡಿ, ಶಶಿಕುಮಾರ್ ಹಿರೇಮನ್ನಾಪುರ, ಜಿಲ್ಲಾಧಿಕಾರಿಗಳ ಕಾರ್ಯಾಲಯಾದ ಸಿಬ್ಬಂದಿ ನಾಗರಾಜ, ಮಹೇಂದ್ರ, ನವೀನ ಕುಮಾರ, ಉದಯ ಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಉಪಸ್ಥಿತರಿದ್ದರು.
ಇಂದು ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ
ಕೊಪ್ಪಳ 10 : 110 ಕೆ.ವಿ ಕೊಪ್ಪಳ ಸ್ಟೇಷನ್ನ ತುರ್ತು ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಫೆಬ್ರವರಿ 11 ರಂದು ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
110 ಕೆ.ವಿ ಕೊಪ್ಪಳ ಸ್ಟೇಷನ್ಗೆ ಒಳಪಡುವ ಎಫ್-10 ಗವಿಮಠ ಹಾಗೂ ಎಫ್-2 ಕೆ.ಡಬ್ಲ್ಯೂ.ಎಸ್ ಫೀಡರ್ಗೆ ಸಂಬಂಧಿಸಿದ ಕುವೆಂಪುನಗರ, ಜಿಲ್ಲಾ ಜೈಲುಖಾನೆ, ಶಫಿ ಗಾಮೇಂರ್ಟ್ಸ್, ಹೂವಿನಾಳ ರಸ್ತೆ ಹಾಗೂ ಹಾಲವರ್ತಿ ರಸ್ತೆಯ ಎಲ್ಲಾ ಶೆಂಗಾ ಮಿಲ್ಗಳು ಮತ್ತು ಗವಿಮಠ ಯಾತ್ರಿನಿವಾಸ, ಈ ಎಲ್ಲಾ 11 ಕೆವಿ ಲೈನ್ಗಳು ಫೆ. 11ರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿವೆ.
ವಿದ್ಯುತ್ ತುರ್ತು ನಿರ್ವಹಣೆ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಕೈಗೊಳ್ಳಬಾರದು. ಒಂದು ವೇಳೆ ವಿದ್ಯುತ್ ಅಫಘಾತ ಸಂಬವಿಸಿದ್ದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.