ಕಾಯಕ,ದಾಸೋಹ: ಬಸವಪ್ರಜ್ಞೆಯ ತಳಹದಿ
Kayaka, Dasoha: The basis of Basavaprachnya
ಕಾಯಕ,ದಾಸೋಹ: ಬಸವಪ್ರಜ್ಞೆಯ ತಳಹದಿ
ಹೂವಿನ ಹಡಗಲಿ 17: ಸತ್ಯ ಶುದ್ಧ ಕಾಯಕ ಮಾಡುವುದು ಕಾಯಕದಿಂದ ಗಳಿಸಿದ ಸಂಪತ್ತನ್ನು ದಾಸೋಹದ ಮೂಲಕ ಸಮಾಜಕ್ಕೆ ವಿನಿಯೋಗಿಸುವುದು ಬಸವ ಪ್ರಜ್ಞೆಯ ತಳಹದಿಯಾಗಿದೆ ಎಂದು ಶಿಕ್ಷಕ,ಸಾಹಿತಿ ರಾಮಪ್ಪ ಕೋಟಿಹಾಳ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹೊಳಗುಂದಿಯ ಗ್ಲೋಬಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಕಾಲೇಜಿನಲ್ಲಿ ಆಯೋಜಿಸಿದ್ದ ಗುಡೆಕೋಟೆ ಕರಿಬಸಪ್ಪ, ಚಂದ್ರಮ್ಮ ಸ್ಮರಣಾರ್ಥ ದತ್ತಿ ಐಗೋಳ ಬಸವರಾಜಪ್ಪ ಸ್ಮರಣಾರ್ಥ ದತ್ತಿ, ತುರುಕಾಣಿ ಶಿವಪುತ್ರ್ಪ ಸ್ಮಾರಕದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ’ಕಾಯಕ ಮತ್ತು ದಾಸೋಹ’, ಹಾಗೂ’ಅವಿಭಕ್ತ ಕುಟುಂಬಗಳು’ ಕುರಿತು ಮಾತನಾಡಿದರು. ದತ್ತಿದಾನಿಗಳಾದ ಗುಡೆಕೋಟೆ ಬಸವರಾಜಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಲ್ಲಿ ಸಂಸ್ಕಾರ ಬೆಳಸುವಲ್ಲಿ, ಒಂಟಿತನ, ಅಭದ್ರತೆ ನೀಗಿಸುವಲ್ಲಿ ಅವಿಭಕ್ತ ಕುಟುಂಬಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಶಾಲೆಯ ಆಡಳಿತಾಧಿಕಾರಿ ಡಿ.ಕರೀಂಸಾಬ್, ಕಾಲೇಜಿನ ಪ್ರಾಚಾರ್ಯ ಜಿ.ಸೋಮನಗೌಡ,ಪಬ್ಲಿಕ್ ಸ್ಕೂಲ್ ಪ್ರಾಚಾರ್ಯರಾದ ಹೆಚ್.ಕಿನ್ನರೇಶ್ವರಿ, ದತ್ತಿದಾನಿಗಳಾದ ಐಗೋಳ ಸುಭಾಷ್ ಇದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನ್ಯಾಸಕ ಬಸವರಾಜಪ್ಪ ಸ್ವಾಗತಿಸಿದರು. ಶಿಕ್ಷಕ ಅಜಯ್ ಕವನ ವಾಚಿಸಿದರು. ವಿ.ಭೀಮಾನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿರು.ಕಸಾಪ ಇಟ್ಟಿಗಿ ಹೋಬಳಿ ಘಟಕದ ಅಧ್ಯಕ್ಷ ಜಿ.ಬಿ.ವಿನಯ್ ರಾಜ್ ಅಧ್ಯಕ್ಷತೆ ವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 