ಖನ್ನೂರ ವಿದ್ಯಾನಿಕೇತನ : ವಾಣಿಜ್ಯ ಪಿ. ಯು. ಸಿ. ವಿದ್ಯಾರ್ಥಿಗಳ ಸಾಧನೆ
Khannoor Vidyaniketan : Commercial P. U. C. Student achievement
ಖನ್ನೂರ ವಿದ್ಯಾನಿಕೇತನ : ವಾಣಿಜ್ಯ ಪಿ. ಯು. ಸಿ. ವಿದ್ಯಾರ್ಥಿಗಳ ಸಾಧನೆ
ರಾಣೇಬೆನ್ನೂರು 7: ದಾವಣಗೆರೆ ಬಾಪೂಜಿ ಕಾಮರ್ಸ್ ಕಾಲೇಜಿನಲ್ಲಿ, ವಾಣಿಜ್ಯ ವಿದ್ಯಾರ್ಥಿಗಳಿಗಾಗಿ," ವಾಣಿಜ್ಯೋತ್ಸವ-2024 ಮತ್ತು "ಬಿಸಿನೆಸ್ ಇಂಡಿಯಾ " ಸ್ಪರ್ಧೆಯು ಇತ್ತೀಚೆಗೆ ನಡೆಯಿತು. ಸದರಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ, ರಾಣೇಬೆನ್ನೂರು ಖನ್ನೂರು ವಿದ್ಯಾನಿಕೇತನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡು, ಎಂದಿನಂತೆ ಸ್ಪರ್ಧಾತ್ಮಕವಾಗಿ ತಮ್ಮ ಸಾಧನೆ ಮೆರೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸ್ಪರ್ಧೆಯಲ್ಲಿ ಆಕಾಶ ಕೋಪರ್ಡೆ, ಮಹಮ್ಮದ್ ರಾಹಿಲ್, ಮಹಮ್ಮದ್ ಸಲೀಂ ಅವರು ಭಾಗವಹಿಸಿ, ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ, ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ, ಸಂಸ್ಥೆಯ ಚೇರ್ಮನ್ ಡಾ, ಪ್ರವೀಣಕುಮಾರ ಎಂ. ಖನ್ನೂ ರ, ಸಿಇಓ, ಡಾ, ಶೈಲಾ ಶ್ರೀ ಪಿ. ಖನ್ನೂ ರ, ಆಡಳಿತಾಧಿಕಾರಿ ನಾಗೇಶ ಮುರಡಣ್ಣನವರ, ಪ್ರಾಚಾರ್ಯ, ಕೆ. ಸುಬ್ಬಾರಾವ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ,ಶಿಕ್ಷಕರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 