ದೆಹಲಿಯ ಗಣರಾಜ್ಯೋತ್ಸವದಲ್ಲಿಂದು ಕಿನ್ನಾಳ ಗ್ರಾ ಪಂ ಅಧ್ಯಕ್ಷೆ ಶ್ವೇತಾ ರಾಘವೇಂದ್ರ ಡಂಬಳ ಭಾಗಿ
ಕೊಪ್ಪಳ 25: ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿಯಅಧ್ಯಕ್ಷರಾದಶ್ರೀಮತಿ ಶ್ವೇತಾ ರಾಘವೇಂದ್ರ ಡಂಬಳ ರವರು ದಿ, 26 ರ ರವಿವಾರ-ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ ಬಂದಿರುವ ಕಾರಣ ದೆಹಲಿ ಪ್ರವಾಸ ಕೈಗೊಂಡಿರುತ್ತೇವೆ ಇದಕ್ಕೆ ಕಾರಣಕರ್ತರಾಗಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಕೊಪ್ಪಳ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕೊಪ್ಪಳ ಮಾದ್ಯಮ ಮಿತ್ರರು ಹಾಗೂ ಕಿನ್ನಾಳ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವರ್ಗ ಹಾಗೂ ಊರಿನ ಎಲ್ಲಾ ಗುರು ಹಿರಿಯರು ಮುಖಂಡರುಗಳಿಗೆ ಹಾಗೂ ಕುರಿಗಾಹಿಗಳಿಗೆ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುವುದಾಗಿ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ರಾಘವೇಂದ್ರ ಡಂಬಳ ಹಾಗೂ ಕಿನ್ನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ರಾಘವೇಂದ್ರ ಡಂಬಳ ರವರು ಜಂಟಿ ಪ್ರಕಟಣೆ ಮೂಲಕ ತಿಳಿಸಿ ಸಹಕರಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.