ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಕಿರಣ್ ಗುಂಗೆರ್ಗೆ ದ್ವಿತೀಯ ಸ್ಥಾನ
Kiran Gunger wins second place in state-level weightlifting competition
ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಕಿರಣ್ ಗುಂಗೆರ್ಗೆ ದ್ವಿತೀಯ ಸ್ಥಾನ
ರಾಣೇಬೆನ್ನೂರ 14: ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಚಾಂಪಿಯನ್ಶಿಪ್ -25, ಭಾರ ಎತ್ತುವ ಸ್ಪರ್ಧೆ ಇತ್ತೀಚೆಗೆ ಆಯೋಜಿಸಿತ್ತು. ಬೆಂಗಳೂರಿನ ರಾಮಮೂರ್ತಿ ನಗರದ ದಿನೇಶ್ ನಾಟ್ಯಾಲಯ ರಂಗಮಂದಿರದಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧಾತ್ಮಕವಾಗಿ ಜರುಗಿದ ಈ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಜೂನಿಯರ್- 74 ಕೆಜಿ ವಿಭಾಗದಲ್ಲಿ ಕಿರಣ್ ಗುಂಗೇರ ದ್ವಿತೀಯ ಸ್ಥಾನ ಪಡೆದು, ರಾಜ್ಯಮಟ್ಟದಲ್ಲಿ ತನ್ನ ಸಾಧನೆ ಮೆರೆದಿದ್ದಾನೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕಲಾವಿದರ ತವರೂರು ಖ್ಯಾತಿಯ ಆರೇಮಲ್ಲಾಪುರ ಗ್ರಾಮದ ಪ್ರತಿಭಾವಂತ ಕಿರಣ್ ಹಾಲೇಶ ಗುಂಗೇರ್, ಸದ್ಯ ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ, ತೃತೀಯ ವರ್ಷದಲ್ಲಿ ತನ್ನ ಶೈಕ್ಷಣಿಕ ಅಧ್ಯಯನ ಪೂರೈಸುತ್ತಿದ್ದಾನೆ. ಕ್ರೀಡಾ ಸಾಧಕ ಕಿರಣ ಗುಂಗೇರ್ ಈತನಿಗೆ, ಜಿಲ್ಲೆಯು ಸೇರಿದಂತೆ ನಾಡಿನ ಅನೇಕ, ಕ್ರೀಡಾ ಚಟುವಟಿಕೆಗಳ ಸಂಘ, ಸಂಸ್ಥೆಗಳು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 