ಕಿತ್ತೂರ ಉತ್ತಮ ಪ್ರವಾಸಿ ತಾಣ: .ವಿಜಯಕುಮಾರ
Kittoor Best Tourist Destination: .Vijayakumar
ಕಿತ್ತೂರ ಉತ್ತಮ ಪ್ರವಾಸಿ ತಾಣ: .ವಿಜಯಕುಮಾರ
ಬೈಲಹೊಂಗಲ 28: ಕಿತ್ತೂರ ಚೆನ್ನಮ್ಮ ಕೋಟೆ ಸ್ಥಳ, ಬೈಲಹೊಂಗಲ ಚೆನ್ನಮ್ಮ ಸಮಾಧಿ ಸ್ಥಳವನ್ನು ಕಿತ್ತೂರ ಪ್ರಾಧಿಕಾರದಿಂದ ಉತ್ತಮ ಪ್ರವಾಸಿ ತಾಣವಾಗಿ ರೂಪಿಸಬೇಕೆಂದು ಬೆಂಗಳೂರಿನ ಕನ್ನಡ ಹೋರಾಟಗಾರ ನಂ.ವಿಜಯಕುಮಾರ ಹೇಳಿದರು. ಅವರು ಬೈಲಹೊಂಗಲದ ವೀರರಾಣಿ ಕಿತ್ತೂರ ಚೆನ್ನಮ್ಮನ ಸಮಾಧಿ ಸ್ಥಳ ಮತ್ತು ಚನ್ನಮ್ಮನ ಕಿತ್ತೂರಿನ ಕೋಟೆ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿ, ಕಿತ್ತೂರಿನಲ್ಲಿರುವ ಅಳಿದುಳಿದ ಕೋಟೆಯನ್ನು ಸಂರಕ್ಷಿತ ಪ್ರದೇಶವಾಗಿ ಅಭಿವೃದ್ದಿಪಡಿಸಬೇಕು. ಚೆನ್ನಮ್ಮ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಸರಕಾರ ಘೋಷಿಸಬೇಕೆಂದರು.ಕನ್ನಡ ಅಂಕಿಗಳ ಪೋಷಕರು, ಹಿರಿಯ ಸಾಹಿತಿಗಳಾದ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸುರೇಶ ದೇಸಾಯಿ ಮಾತನಾಡಿ, ಬೈಲಹೊಂಗಲ ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ದಿ ಮಾಡುತ್ತಿರುವದು ಶ್ಲಾಘನೀಯ. ಇಂದಿನ ಯುವಕರು ವೀರರಾಣಿ ಚೆನ್ನಮ್ಮ , ಬೆಳವಡಿ ಮಲ್ಲಮ್ಮ, ಸಂಗೋಳ್ಳಿ ರಾಯಣ್ಣನ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.ಇದೇ ವೇಳೆ ಕನ್ನಡ ಹೋರಾಟಗಾರ ನಂ.ವಿಜಯಕುಮಾರ ಅವರನ್ನು ಸತ್ಕರಿಸಲಾಯಿತು.ಬೈಲಹೊಂಗಲ ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷ ಸಿ.ವಾಯ್.ಮೆಣಸಿನಕಾಯಿ, ಸಾಹಿತಿ ಲಕ್ಷ್ಮಣ ಡೊಂಬರ, ಇನ್ನಿತರರು ಇದ್ದರು..
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 