ಕೂಡ್ಲಿಗಿ: ಆಕಸ್ಮಿಕ 6 ಕುರಿಗಳ ಸಾವು ಕುರಿಗಾರರಲ್ಲಿ ಆತಂಕ
ಲೋಕದರ್ಶನ ವರದಿ
ಕೂಡ್ಲಿಗಿ 15: ಪಟ್ಟಣ ಹೊರ ವಲಯದಲ್ಲಿನ ಸೊಲ್ಲಮ್ಮ ಆಲದ ಮರದ ಬಳಿ ಭಾನುವಾರ ಸಂಜೆ ಮೇಯುತ್ತಿದ್ದ 6 ಕುರಿಗಳು ಏಕಾ ಏಕಿ ಸಾವನ್ನಪ್ಪಿವೆ. ಇದರಿಂದ ಕುರಿಗಾರರು ಆತಂಕಗೊಂಡಿದ್ದಾರೆ.
ಪಟ್ಟಣದ ಸುಮಾರು 200 ಕುರಿಗಳು ಇದ್ದು, ಪಿ. ಕೊಟ್ರೇಶ್-1, ಬಂಗಿ ಕೊಟ್ರೇಶ್-2 ಹಾಗೂ ಸ್ವಾಮಯ್ಯನವರ ಹನುಮಂತಪ್ಪ ಅವರಿಗೆ ಸೇರಿದ 3 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳು ಅಸ್ತವ್ಯಸ್ತಗೊಂಡಿವೆ. ವಿಷಯ ತಿಳಿದ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಹೆಚ್ಚು ಹಸಿರು ಹುಲ್ಲನ್ನು ತಿಂದಿದ್ದು, ಜೀರ್ಣವಾಗದೆ ಹೊಟ್ಟೆ ಉಬ್ಬರವಾಗಿ ಮೃತಪಟ್ಟಿದ್ದಾವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ.
ಕುರಿಗಳ ಸಾವಿಗೆ ನಿಕರ ಮಾಹಿತಿ ನೀಡಿ, ಮುಂದೆ ವಹಿಸಬೇಕಾದ ಕ್ರಮಗಳ ಬಗ್ಗೆ ಕುರಿಗಾರರಿಗೆ ಮಾಹಿತಿ ಒದಗಿಸಬೇಕು ಎಂದು ಸ್ವಾಮಯ್ಯನವರ ನಾಗರಾಜ ಪಶು ಅವೈದ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 