ಕೂಡ್ಲಿಗಿ: ಆಕಸ್ಮಿಕ 6 ಕುರಿಗಳ ಸಾವು ಕುರಿಗಾರರಲ್ಲಿ ಆತಂಕ
ಲೋಕದರ್ಶನ ವರದಿ
ಕೂಡ್ಲಿಗಿ 15: ಪಟ್ಟಣ ಹೊರ ವಲಯದಲ್ಲಿನ ಸೊಲ್ಲಮ್ಮ ಆಲದ ಮರದ ಬಳಿ ಭಾನುವಾರ ಸಂಜೆ ಮೇಯುತ್ತಿದ್ದ 6 ಕುರಿಗಳು ಏಕಾ ಏಕಿ ಸಾವನ್ನಪ್ಪಿವೆ. ಇದರಿಂದ ಕುರಿಗಾರರು ಆತಂಕಗೊಂಡಿದ್ದಾರೆ.
ಪಟ್ಟಣದ ಸುಮಾರು 200 ಕುರಿಗಳು ಇದ್ದು, ಪಿ. ಕೊಟ್ರೇಶ್-1, ಬಂಗಿ ಕೊಟ್ರೇಶ್-2 ಹಾಗೂ ಸ್ವಾಮಯ್ಯನವರ ಹನುಮಂತಪ್ಪ ಅವರಿಗೆ ಸೇರಿದ 3 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳು ಅಸ್ತವ್ಯಸ್ತಗೊಂಡಿವೆ. ವಿಷಯ ತಿಳಿದ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಹೆಚ್ಚು ಹಸಿರು ಹುಲ್ಲನ್ನು ತಿಂದಿದ್ದು, ಜೀರ್ಣವಾಗದೆ ಹೊಟ್ಟೆ ಉಬ್ಬರವಾಗಿ ಮೃತಪಟ್ಟಿದ್ದಾವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ.
ಕುರಿಗಳ ಸಾವಿಗೆ ನಿಕರ ಮಾಹಿತಿ ನೀಡಿ, ಮುಂದೆ ವಹಿಸಬೇಕಾದ ಕ್ರಮಗಳ ಬಗ್ಗೆ ಕುರಿಗಾರರಿಗೆ ಮಾಹಿತಿ ಒದಗಿಸಬೇಕು ಎಂದು ಸ್ವಾಮಯ್ಯನವರ ನಾಗರಾಜ ಪಶು ಅವೈದ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 