ಕೊಪ್ಪಳ : ಟೈಲರಿಂಗ್ ತರಬೇತಿದಾರರಿಗೆ ಪ್ರತಿಜ್ಞಾವಿಧಿ ಸ್ವೀಕಾರ
ಕೊಪ್ಪಳ 09: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿಗಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಸಿರಗುಂಪಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟೈಲರಿಂಗ್ ತರಬೇತಿದಾರರಿಂದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಮತದಾನ ಜಾಗೃತಿಗಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಕುಷ್ಟಗಿ ತಾಲೂಕ ಸ್ವೀಪ್ ಸಮಿತಿಯಿಂದ ತಾಲೂಕಿನ ಸಿರಗುಂಪಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದಾಯ ಭವನದಲ್ಲಿ ಹೊಲಿಗೆ (ಟೈಲರಿಂಗ್) ತರಬೇತಿ ಪಡೆಯುತ್ತಿರುವ ಮಹಿಳೆಯರಿಗಾಗಿ ಮಂಗಳವಾರದಂದು ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕುಷ್ಟಗಿ ತಾಲೂಕ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಬಸಣ್ಣ ಅವರು ಮತದಾನ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಎ.ಪಿ.ಆರ್.ಒ. ಎನ್.ಎಫ್. ಬಡಿಗೇರ, ಐಸಿ ಸಂಯೋಜಕ ಚಂದ್ರಶೇಖರ ಹಿರೇಮಠ, ಸಿರಗುಂಪಿ ಪಿ.ಡಿ.ಒ ಅಮರೇಶ ಕರಡಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 