ಕೊಪ್ಪಳ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡದಿಂದ ಮತಗಟ್ಟೆಗಳ ಭೇಟಿ ಪರಿಶೀಲನೆ
ಕೊಪ್ಪಳ 15: ಲೊಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ವಿವಿಧ ಅಧಿಕಾರಿಗಳ ತಂಡವು ಗುರುವಾರದಂದು ವಿವಿಧ ಗ್ರಾಮಗಳ ಸೂಕ್ಷ್ಮ/ ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲಿಸಿದೆ.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ, ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಗಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳನ್ನೊಳಗೊಂಡ ತಂಡವು ಕೊಪ್ಪಳ ತಾಲೂಕಿನ ಮಂಗಳಾಪುರ, ಹೊರತಟ್ನಾಳ, ಬಹದ್ದೂರ ಬಂಡಿ, ಹ್ಯಾಟಿ, ಕುಣಿಕೇರಾ, ಕುಣಿಕೇರಾ ತಾಂಡಾ, ಹಿರೇಬಗನಾಳ, ಕನಕಾಪುರ, ಹೊಸ ಕನಕಾಪುರ ಹಾಗೂ ಗಿಣಿಗೇರಾ ಗ್ರಾಮಗಳಿಗೆ ತೆರಳಿ, ಸೂಕ್ಷ್ಮ/ ಅತೀ ಸೂಕ್ಷ್ಮ ಮತಗಟ್ಟೆಗಳ ಕುರಿತು ಪರಿಶೀಲನೆ ನಡೆಸಿತು. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಸಹಕರಿಸಿ, ಶಾಂತಿಯುತವಾಗಿ ಮತದಾನ ನಡೆಸಿಕೊಡಲು ಸಹಕರಿಸಬೇಕು ಎಂದು ಎಲ್ಲಾ ಗ್ರಾಮಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಚರ್ಚಿ ಸಿದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 