ಕೊಪ್ಪಳ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡದಿಂದ ಮತಗಟ್ಟೆಗಳ ಭೇಟಿ ಪರಿಶೀಲನೆ
ಕೊಪ್ಪಳ 15: ಲೊಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ವಿವಿಧ ಅಧಿಕಾರಿಗಳ ತಂಡವು ಗುರುವಾರದಂದು ವಿವಿಧ ಗ್ರಾಮಗಳ ಸೂಕ್ಷ್ಮ/ ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲಿಸಿದೆ.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ, ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಗಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳನ್ನೊಳಗೊಂಡ ತಂಡವು ಕೊಪ್ಪಳ ತಾಲೂಕಿನ ಮಂಗಳಾಪುರ, ಹೊರತಟ್ನಾಳ, ಬಹದ್ದೂರ ಬಂಡಿ, ಹ್ಯಾಟಿ, ಕುಣಿಕೇರಾ, ಕುಣಿಕೇರಾ ತಾಂಡಾ, ಹಿರೇಬಗನಾಳ, ಕನಕಾಪುರ, ಹೊಸ ಕನಕಾಪುರ ಹಾಗೂ ಗಿಣಿಗೇರಾ ಗ್ರಾಮಗಳಿಗೆ ತೆರಳಿ, ಸೂಕ್ಷ್ಮ/ ಅತೀ ಸೂಕ್ಷ್ಮ ಮತಗಟ್ಟೆಗಳ ಕುರಿತು ಪರಿಶೀಲನೆ ನಡೆಸಿತು. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಸಹಕರಿಸಿ, ಶಾಂತಿಯುತವಾಗಿ ಮತದಾನ ನಡೆಸಿಕೊಡಲು ಸಹಕರಿಸಬೇಕು ಎಂದು ಎಲ್ಲಾ ಗ್ರಾಮಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಚರ್ಚಿ ಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 