ಕೊಪ್ಪಳ : ನರೇಗಾ ಸಿಬ್ಬಂದಿ ಮಗನ ನಾಮಕರಣದಲ್ಲೂ ಮತದಾನ ಜಾಗೃತಿ
ಕೊಪ್ಪಳ 10: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಎಡಿಪಿಸಿ ನರೇಗಾ ಸಿಬ್ಬಂದಿ ಮಹಾಂತ ಸ್ವಾಮಿ ಎಂಬುವವರ ಮಗನ ನಾಮಕಾರಣ ಸಮಾರಂಭದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದಕ್ಕೆ ಗಂಗಾವತಿಯ ಎಡಿಪಿಸಿ ನರೇಗಾ ಸಿಬ್ಬಂದಿ ಮಹಾಂತ ಸ್ವಾಮಿರವರು ಮತದಾನ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ನಿಟ್ಟಿನಲ್ಲಿ ಮಹಾಂತ ಸ್ವಾಮಿರವರು ತಮ್ಮ ಮಗನ ನಾಮಕರಣ ಸಮಾರಂಭಕ್ಕೆ ಆಗಮಿಸಿದ ಬಂಧು-ಬಳಗದವರಿಗೆ ಮತದಾನ ಜಾಗೃತಿ ಮೂಡಿಸಿದ್ದಾರೆ. ಇವರ ಈ ಕಾರ್ಯಕ್ರಮಕ್ಕೆ ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.
ಸಮಾರಂಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಕಡ್ಡಾಯ ಮತದಾನ ಮಾಡುವಂತೆ ಸಾರ್ವಜನಿಕ ಪ್ರತಿಜ್ಞಾವಿಧಿ ಭೋದಿಸಲಾಯಿತು ಹಾಗೂ ಅಣಕು ಮತದಾನವನ್ನು ಸಹ ಮಾಡಿಸಲಾಯಿತು. ಅಲ್ಲದೇ ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರಗಳ ಕಾರ್ಯದ ಬಗ್ಗೆ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ಜಿಲ್ಲಾ ಸ್ವಿಪ್ ಸಮಿತಿಯ ಶ್ರೀನಿವಾಸ್ ಚಿತ್ರಗಾರ, ತಾನೋಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 