ಕೊಪ್ಪಳ : ರೈತರು ದೇಶದ ಬೆನ್ನೆಲುಬು: ಗವಿಸಿದ್ದಪ್ಪ ಕರಡಿ
ಲೋಕದರ್ಶನ ವರದಿ
ಕೊಪ್ಪಳ 10: ಸಕಾಲಕ್ಕೆ ಮುಂಗಾರು ಮಳೆಯಾಗಿ, ಸರಿಯಾದ ಸಮಯಕ್ಕೆ ರೈತರು ಬಿತ್ತನೆ ಮಾಡಿ, ಸರಿಯಾದ ಬೆಳೆ ಬರಬೇಕು ನಚಿತರ ರೈತರಿಗೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗಬೇಕು ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುವುದಾಗಿ ಲೇಬಗೇರಿ ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ ಹೇಳಿದರು.
ಅವರು ಕೊಪ್ಪಳದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಈ ವರ್ಷದ ಮುಂಗಾರು ಬಿತ್ತನೆ ಬೀಜವನ್ನು ರೈತರಿಗೆ ವಿತರಣೆ ಮಾಡಿ ನಂತರ ಮಾತನಾಡಿ ಜೈ ಜವಾನ ಜೈ ಕಿಸಾನ್, ರೈತ ನಕ್ಕರೆ ಜಗವೆಲ್ಲ ಸಕ್ಕರೆ ಎಂಬಂತೆ ರೈತರಿಗೆ ಈ ಬಾರಿ ಸರಿಯಾದ ಮುಂಗಾರು ಮಳೆಯಾಗಲಿ, ಕೃಷಿ ಇಲಾಖೆಯು ರೈತರಿಗೆ ಸರಿಯಾದ ಮಾಹಿತಿ, ಏನಾದರೂ ಸಮಸ್ಯೆಗಳು ಇದ್ದರೆ ಸ್ಪಂದಿಸಲಿ ಎಂದರು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತಿ ಮಾಜಿ ಸದಸ್ಯ ರಮೇಶ ಚೌಡ್ಕಿ, ದ್ಯಾಮಣ್ಣ ಮ್ಯಾದನೇರಿ, ಕೃಷಿ ಇಲಾಖೆಯ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರದ ಗೊಬ್ಬರಗುಂಪಿ,ಅನೇಕ ರೈತರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 