ಕೊಪ್ಪಳ: ಚುನಾವಣಾ ಸಿಬ್ಬಂದಿಗಳಿಗೆ ತರಬೇತಿ: ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಭೇಟಿ
ಕೊಪ್ಪಳ 09: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಕುಷ್ಟಗಿ ಪಟ್ಟಣದ ಪದವಿ ಕಾಲೇಜಿನಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾದ ತರಬೇತಿ ಕಾಯರ್ಾಗಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಭೇಟಿ ನೀಡಿದರು.
ಚುನಾವಣಾ ಕರ್ತವ್ಯಕ್ಕೆ ನೇಮಿಸಲ್ಪಟ್ಟಿರುವವರು ತುಂಬಾ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ತಮ್ಮ ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷ್ಯತನ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ತಮಗೆ ನೀಡಿರುವ ಕೆಲಸವನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಸೂಚನೆ ನೀಡಿದರು. ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಗಿ ಸೇರಿದಂತೆ ಕೆಲ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಮತ ಯಂತ್ರ ಇವಿಎಂ ಹಾಗೂ ಮತ ಖಾತ್ರಿ ಯಂತ್ರ ವಿವಿ ಪ್ಯಾಟ್ ಕಾರ್ಯದ ಕುರಿತು ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿತವಾಗಿ ಮಾಹಿತಿಯನ್ನು ನೀಡಲಾಯಿತು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 