ಕೊಪ್ಪಳ: ಮದುವೆ ಮಂಟಪದಲ್ಲೂ ಮತದಾನ ಜಾಗೃತಿ
ಕೊಪ್ಪಳ 11: ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮದುವೆ ಮಂಟಪದಲ್ಲೂ ಮತದಾನ ಜಾಗೃತಿ ಮೂಡಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಗುರುವಾರದಂದು ಜಿಲ್ಲೆಯ ಕುಷ್ಟಗಿ ತಾಲೂಕು ಪಂಚಾಯಿತಿ ಸಿಬ್ಬಂದಿ ವೀರಯ್ಯರವರ ಮಗಳ ಮದುವೆ ಸಮಾರಂಭವು ಇದಕ್ಕೆ ಸಾಕ್ಷೀಯಾಗಿದೆ.
ಹೌದು ಕುಷ್ಟಗಿ ತಾಲೂಕು ಮತದಾರರ ಜಾಗೃತಿ ಸಮಿತಿಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮದುವೆ ಸಂಭ್ರಮದಲ್ಲಿ ಸ್ವೀಪ್ ಕಾರ್ಯಕ್ರಮ ಆಯೋಜಿಸಿದ್ದು, ವಿಶೇಷವಾಗಿತ್ತು. ಕುಷ್ಟಗಿ ತಾಲೂಕು ಪಂಚಾಯಿತಿ ಸಿಬ್ಬಂದಿಯಾದ ವೀರಯ್ಯರವರ ಮಗಳ ಮದುವೆ ಸಮಾರಂಭದಲ್ಲಿ ಕಡ್ಡಾಯ ಮತದಾನದ ಬಗ್ಗೆ ನವ ದಂಪತಿಗಳ ಜೊತೆ ಮದುವೆಗೆ ಆಗಮಿಸಿದ ಎಲ್ಲ ಬಂಧು ಬಳಗದವರಲ್ಲಿ ಜಾಗೃತಿ ಮೂಡಿಸಲಾಯಿತು ಮತ್ತು ಮತದಾನದ ಪ್ರತಿಜ್ಞಾವಿಧಿಯನ್ನೂ ಸಹ ಬೋಧಿಸಲಾಯಿತು. ತಾ.ಪಂ. ಇಒ, ಎಡಿ, ಪಿಡಿಒಗಳು ಮತ್ತು ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 