ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನೆ: ಕೊಪ್ಪಳ ನಗರ ಸಭೆಯ ಕ್ರಮ

ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನೆ: ಕೊಪ್ಪಳ ನಗರ ಸಭೆಯ ಕ್ರಮ Koppal City Council action to catch stray cattle and send them to cowshed

ಕೊಪ್ಪಳ 19 : ಕೊಪ್ಪಳ ನಗರದ ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೆಂಕಟೇಶನ ನಾಗನೂರ ಅವರು ತಿಳಿಸಿದ್ದಾರೆ. ಘನ ಸವೋಚ್ಛ ನ್ಯಾಯಾಲಯದ ಆದೇಶದನುಸಾರ, ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಬಿಡಾಡಿ ದನಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಅವುಗಳನ್ನು ಹಿಡಿದು ಗೋಶಾಲೆಗೆ ರವಾನಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೊಪ್ಪಳ ನಗರದ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.