ಕೊಟ್ಟೂರು: ಉಜ್ಜಯಿನಿ ಪೀಠದಿಂದ ಐದು ಸಾವಿರ ಬೀಜದುಂಡೆ ತಯಾರಿಕೆ
ಲೋಕದರ್ಶನ ವರದಿ
ಕೊಟ್ಟೂರು 19: ಉಜ್ಜಯಿನಿ ಸದ್ಧರ್ಮ ಪೀಠದಿಂದ ಶಾಲಾ ವಿದ್ಯಾರ್ಥಿಗಳೊಂದಿಗೆ ಐದು ಸಾವಿರ ಬೀಜದುಂಡೆ ಸಿದ್ಧ್ದಪಡಿಸಿ ಭಕ್ತರಿಗೆ ವಿತರಿಸಲಾಗುವುದು ಎಂದು ಶ್ರೀಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.
ಸದ್ಧರ್ಮ ಪೀಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಜ್ಜಯಿನಿ ಸದ್ಧ್ದರ್ಮ ಪೀಠದ ಮಳೆ ಶಕೆ ಪೀಠವಾಗಿರುವುದರಿಂದ ಉಜ್ಜಯಿನಿಯನ್ನು ಹಸಿರು ಗ್ರಾಮವಾಗಿಸುವ ಉದ್ದೇಶ ಹೊಂದಲಾಗಿದೆ. ಈ ದಿಸೆಯಲ್ಲಿ ಬೀಜದುಂಡೆಗಳನ್ನು ತಯಾರಿಸಲಾಗುತ್ತಿದ್ದು, ಶ್ರಾವಣ ಮಾಸದಲ್ಲಿ ಶ್ರೀಪೀಠಕ್ಕೆ ಬರುವ ಭಕ್ತರಿಗೆ ನೀಡಿ ಹೊಲದಲ್ಲಿ ನೆಟ್ಟು ಬೆಳೆಸಲು ತಿಳಿಸಲಾಗುವುದು ಎಂದರು.
ಅಲ್ಲದೆ ತಾವು ಭಾಗವಹಿಸುವ ಸಾಮೂಹಿಕ ವಿವಾಹದಲ್ಲಿ ನವ ಜೋಡಿಗಳಿಗೆ ಸಸಿಗಳನ್ನು ವಿತರಿಸುವ ಸಂಪ್ರದಾಯವನ್ನು ಆಚರಣೆಗೆ ತಂದಿದ್ದು, ಆ ಸಸಿಗಳನ್ನು ಜೋಪಾನವಾಗಿ ಮಕ್ಕಳಂತೆ ಬೆಳಸಬೇಕು. ಭಕ್ತರಿಗೆ ಧರ್ಮೋಪದೇಶದ ಜತೆಗೆ ಪ್ರಕೃತಿ ಎಷ್ಟು ಮುಖ್ಯ, ಪ್ರಕೃತಿ ನಾಶದಿಂದ ಉಂಟಾಗುವ ದುಷ್ಪರಿಣಾಮ, ಮುಂದಿನ ಪೀಳಿಗೆ ಅನುಭವಿಸುವ ಕಷ್ಟಗಳ ಅರಿವು ಮೂಡಿಸಲಾಗುವುದು. ಶ್ರೀಪೀಠದಲ್ಲಿ ಬೀಜದುಂಡೆಗಳನ್ನು ತಯಾರಿಸಲು ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಶ್ರೀಪೀಠದ ಸಹಾಯಕ ಕಾರ್ಯದರ್ಶಿ ವೀರೇಶ, ವಕೀಲ ಅಳವರ ಮರುಳಸಿದ್ದಪ್ಪ ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 