ಕೊವಿಡ್-19: ಪ್ರತಿಬಂಧ ಉದ್ದೇಶ ಈಡೇರಲು ಜಿಲ್ಲಾ ನಾಕಾಬಂದಿ ರಕ್ಷಾ ಕವಚವಾಗಿ ಕೆಲಸ ಮಾಡಿ: ಸಚಿವ ಪಾಟೀಲ
ಗದಗ 18: ಕೊವಿಡ್-19 ಸೋಂಕು ತಡೆಗೆ ಜಿಲ್ಲೆಯ ಲಾಕಡೌನ ಜೊತೆಗೆ ಜಿಲ್ಲೆಗೆ ಹೊರಗಿನಿಂದ ಸೋಂಕು ಬರದಂತೆ ತಡೆಯಲು ಗದಗ ಜಿಲ್ಲೆಯ ಎಲ್ಲ ಚೆಕಪೋಸ್ಟ ಅಧಿಕಾರಿ ಸಿಬ್ಬಂದಿ ಜಿಲ್ಲೆಯ ಜನರ ರಕ್ಷಾ ಕವಚದಂತೆ ತಮಗೆ ವಹಿಸಿರುವ ತಪಸಾಣಾ ಮತ್ತು ನಿಯಂತ್ರಣ ಕಾರ್ಯಗಳನ್ನು ಯಾವುದೇ ದಾಕ್ಷಿಣ್ಯವಿಲ್ಲದೇ ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ ಸೂಚಿಸಿದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಇರುವ ಕೊವಿಡ್-19 ನಿಯಂತ್ರಣದ ಅಂಗವಾಗಿ ಸ್ಥಾಪಿತ ಕೊಣ್ಣೂರು ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಅವರು ಕಾರ್ಯ ಚಟುವಟಿಕೆಯನ್ನು ಪರಿಶೀಲಿಸಿದರು.
ಕೊವಿಡ್-19 ವಿರುದ್ಧದ ಹೋರಾಟದಲ್ಲಿ ನಮ್ಮ ಜಿಲ್ಲೆಗೆ ಪ್ರವೇಶಿಸುವ ಪ್ರತಿ ವ್ಯಕ್ತಿಯ ಮತ್ತು ವಾಹನದ ತಪಾಸಣೆ ಕಟ್ಟು ನಿಟ್ಟಾಗಿ ನಡೆಸಬೇಕು. ಸಂಶಯ ಪ್ರಕರಣವಿದ್ದಲ್ಲಿ ತಕ್ಷಣ ಸಂಬಂಧಿತ ಅಧಿಕಾರಿಗೆ ಮಾಹಿತಿ ನೀಡಬೇಕು. ಸರಿಯಾದ ದಾಖಲೆ ಇಲ್ಲದಿದ್ದಲ್ಲಿ ವಾಹನಗಳನ್ನು ವಶಪಡಿಸಿಕೊಂಡು ವರದಿ ಸಲ್ಲಿಸಬೇಕು. ಇದು ಸಾರ್ವಜನಿಕ ಆರೋಗ್ಯದ ವಿಪ್ಪತ್ತಿನ ಸಂದರ್ಭವಿದ್ದು ಒಂದೇ ಒಂದು ತಪ್ಪು ವೀಪರಿತ ಪರಿಣಾಮಕ್ಕೆ ಕಾರಣವಾಗಲಿದೆ. ಆದುದರಿಂದ ಜಿಲ್ಲೆಯ ಎಲ್ಲ ಗಡಿ ಚೆಕಪೋಸ್ಟ ಗಳು ಸರಿಯಾಗಿ ಕರ್ತವ್ಯ ನಿರ್ವಹಿಸುವುದು ಅತ್ಯವಶಕ ಎಂದು ಸಚಿವರು ತಿಳಿಸಿದ್ದಾರೆ.
ಗದಗ ಬಾಗಲಕೋಟೆಯ ಚೆಕಪೋಸ್ಟ ನಲ್ಲಿ ನಿರತ ಸಿಬ್ಬಂದ್ದಿಗಳಿಗೆ ಮಜ್ಜಿಗೆಯ ವಿತರಿಸಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 