ಕುಳೆಕುಮಟಗಿಗೆ ರೈತ ಸೇವಾ ರತ್ನ ಪ್ರಶಸ್ತಿ ಪ್ರದಾನ
Kulekumatagi presented with Raitha Seva Ratna Award
ದೇವರಹಿಪ್ಪರಗಿ 20: ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕಾ ಅಧ್ಯಕ್ಷರಾದ ಈರ್ಪ ಕುಳೆಕುಮಟಗಿ ಅವರಿಗೆ ರಾಜ್ಯಮಟ್ಟದ ರೈತ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ, ಗೌರವಿಸಲಾಯಿತು.ಕಾವ್ಯಶ್ರೀ ಚಾರಿಟಲ್ ಟ್ರಸ್ಟ್ (ರಿ) ಕರ್ನಾಟಕ ಹಾಗೂ ಯುಗ ದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು ವಿಜಯಪುರ ನಗರದ ಗಾಂಧಿ ವೃತ್ತ ಹತ್ತಿರ ಸಂತ ಅಣ್ಣಮ್ಮನವರ ಚರ್ಚ. ಕವಿ- ಕಾವ್ಯ- ಸಂಭ್ರಮ-2025ರ ರೈತ ಹೋರಾಟಗಾರರ ಕ್ಷೇತ್ರದಲ್ಲಿ ದೇವರ ಹಿಪ್ಪರಗಿ ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಈರ್ಪ ಕುಳೇಕುಮಟಗಿ ಅವರು ಸಲ್ಲಿಸಿರುವ ಅನನ್ಯ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ರೈತ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಇದೇ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಸಿಂದಗಿ ವ್ಯವಸಾಯ ಉತ್ಪನ್ನ ಸಹಕಾರಿ ಸಂಘದ ತಾಲೂಕು ಅಧ್ಯಕ್ಷ ಸಂಗಮೇಶ ಛಾಯಗೋಳ, ರೈತ ಸಂಘದ ತಾಲೂಕು ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ, ಮಾಜಿ ತಾಪಂ ಅಧ್ಯಕ್ಷ ಮಲ್ಲನಗೌಡ ಬಿರಾದಾರ, ಕೋರವಾರ ಗ್ರಾಮದ ಹಿರಿಯರು ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 