ಇಂದು ಅಡವೀಂದ್ರಸ್ವಾಮಿ ಮಠದಲ್ಲಿ ಕುಮಾರವ್ಯಾಸ ಜಯಂತಿ ಆಚರಣೆ
Kumaravyasa Jayanti celebration at Advindraswamy Math today
ಗದಗ 05: ನಗರದ ಮುಳಗುಂದನಾಕಾ ಬಳಿಯ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ಜ.6 ರಂದು ಸಂಜೆ 6.30 ಗಂಟೆಗೆ 343ನೇ ಮಾಸಿಕ ಶಿವಾನುಭವ ಹಾಗೂ ಕುಮಾರವ್ಯಾಸ ಜಯಂತಿ ಆಚರಣೆ ಗದಗ ಜಿಲ್ಲೆಯ ಸಂಸ್ಕಾರಭಾರತಿ ಸಹಯೋಗದಲ್ಲಿ ಜರುಗಲಿದೆ. ಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಸಮ್ಮುಖ ವಹಿಸುವರು. ಶಿವಾನುಭವ ಸಮಿತಿ ಅಧ್ಯಕ್ಷರಾದ ಡಾ.ರಾಜೇಂದ್ರ ಗಡಾದ ಅಧ್ಯಕ್ಷತೆ ವಹಿಸುವರು.
ಗಮಕ ಕಲಾರತ್ನ ಗುರುವಿನಹಳ್ಳಿಯ ವಿಶ್ವನಾಥ ಕುಲಕರ್ಣಿ ಅರು ಗದುಗಿನ ಭಾರತ ವಾಚನ-ವ್ಯಾಖ್ಯಾನ ಕುರಿತು ಉಪನ್ಯಾಸ ನೀಡುವರು. ಸಂಗೀತ ಶಿಕ್ಷಕ ಶ್ರೀಕಾಂತ ಹೂಲಿ ಅವರು ಸಂವಾದಿನಿ ಸಾಥ್ ನೀಡುವರು. ಗದಗ ಜಿಲ್ಲಾ ಸಂಸ್ಕಾರಭಾರತಿ ಅಧ್ಯಕ್ಷರಾದ ಪಿ.ಎ. ಕುಲಕರ್ಣಿ ಗೌರವ ಉಪಸ್ಥಿತರಿರುವರು.
ಜಾತ್ರಾಮಹೋತ್ಸವ ಸಮಿತಿ ಅಧ್ಯಕ್ಷರಾದ ಸದಾಶಿವಯ್ಯ ಎಸ್. ಮದರಿಮಠ, ಶ್ರೀಮತಿ ಸುವರ್ಣ ಎಸ್. ಮದರಿಮಠ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಬಿ.ಡಿ. ಕಿಲಬನವರ, ಜಿಲ್ಲಾ ಬ್ಯಾಡ್ಮಿಂಟನ್ ಟ್ರೋಫಿ ವಿಜೇತರಾದ ಕುಮಾರ ವೇದಾಂತ, ರಾಜು, ಸಿಕ್ಕಲಗಾರ ಅವರನ್ನು ಸನ್ಮಾನಿಸಲಾಗುವುದು. ಬಳಿಕ ಲಿಂ.ಶ್ರೀಮತಿ ಶೋಭಾ ಶಿದ್ರಾಮಯ್ಯ ಸಂಶಿಮಠ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ಜರುಗುವುದು.
ಆರೋಗ್ಯ ಇಲಾಖೆಯ ಮಂಜುನಾಥ ಕಿಲಬನವರ ಹಾಗೂ ರಾಜೇಶ್ವರಿ ಕಲಾಕುಟೀರದ ಸಂಸ್ಥಾಪಕರಾದ ಗಜಾನನ ಶೇಷಗಿರಿ ವೆರ್ಣೇಕರ, ಶಿವಾನುಭವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಪಾಟೀಲ, ಸಾಂಸ್ಕೃತಿಕ ಕಾರ್ಯದರ್ಶಿ ಗುರ್ಪ ನಿಡಗುಂದಿ, ಕೋಶಾಧ್ಯಕ್ಷರಾದ ಸಿದ್ಧಣ್ಣ ಜವಳಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸರ್ವರೂ ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 