ಪುದುಚೆರಿಯಲ್ಲಿ ಎರಡನೇ ದಿನವೂ ಕುಂಭದ್ರೋಣ ಮಳೆ ಮುಂದುವರಿಕೆ
ಪುದುಚೆರಿ, ಡಿ 1-ಪುದುಚೆರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡನೇ ದಿನವೂ ಧಾರಾಕಾರ ಮಳೆ ಮುಂದುವರೆದಿದ್ದು, ಭಾನುವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ.
ಪುದುಚೆರಿಯಲ್ಲಿ ಕಳೆದ ಒಂದು ವಾರದಿಂದ ಮಳೆ ಬೀಳುತ್ತಿದೆ. ಈಶಾನ್ಯ ಮುಂಗಾರು ತೀವ್ರಗೊಂಡಿದ್ದರಿಂದ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಪ್ರದೇಶಗಳಲ್ಲಿ ನಿಂತಿರುವ ನೀರು ಪಂಪ್ ಮಾಡುವಲ್ಲಿ ಆಡಳಿತ ಯಂತ್ರ ನಿರತವಾಗಿದೆ. ಅನೇಕ ರಸ್ತೆಗಳು ನೀರಿನಲ್ಲಿ ಮುಳುಗಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ರಸ್ತೆಗಳೂ ಹಾನಿಗೊಂಡಿವೆ. ಭಾನುವಾರವಾದ್ದರಿಂದ ವಾಹನ ಸಂಚಾರ ಕಡಿಮೆ ಇತ್ತು. ಪುದುಚೆರಿಯ ಅನೇಕ ಕೆರೆ ಕುಂಟೆಗಳು ಭಾರೀ ಮಳೆಯಿಂದ ಬೇಗನೆ ತುಂಬುತ್ತಿವೆ.
ಭಾನುವಾರ ಬೆಳಿಗ್ಗೆ 8.30ರ ವೇಳೆಗೆ ಕಳೆದ 24 ತಾಸಿನಲ್ಲಿ ಪುದುಚೆರಿಯಲ್ಲಿ 11.4 ಸೆಂ.ಮೀ ಮಳೆಯಾಗಿದೆ. ಈ ಮಧ್ಯೆ, ವಿಳ್ಳುಪುರಂನ ವೀಡುರ್ ಅಣೆಕಟ್ಟೆಯ ಗೇಟ್ಗಳನ್ನು ಯಾವುದೇ ವೇಳೆ ತೆಗೆಯಬಹುದಾಗಿದ್ದರಿಂದ ಶಂಕರಾಭರಣಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನ್ನಾಡಿಪೇಟ್ ಪಂಚಾಯಿತಿ ಆಡಳಿತ ತಿಳಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 