ಕುರುಗೋಡು: ವಿಜೃಂಭಣೆಯಿಂದ ಜರುಗಿದ ನಾರಾಯಣ ಸ್ವಾಮಿ ಮೆರವಣಿಗೆ
ಲೋಕದರ್ಶನ ವರದಿ
ಕುರುಗೋಡು 09: ಪಟ್ಟಣ ಸಮೀಪದ ಯಲ್ಲಾಪುರ ಗ್ರಾಮದಲ್ಲಿ ಬಣಜಿಗ ಸಮುದಾಯದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಯೋಗಿ ನಾರೇಯಣ ಸ್ವಾಮಿಯ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಅಂಚೆ ಅಂಜಿನಪ್ಪ ಮಾತನಾಡಿ, ಶ್ರೀ ಯೋಗಿ ನಾರೇಯಣ ಸ್ವಾಮಿಜಿಯವರು ಅವತಾರ ಪುರಷರು ತಮ್ಮ ಆದರ್ಶ ಜೀವನ ಹಾಗೂ ಆಧ್ಯಾತ್ಮಿಕ ವಿಚಾರಧಾರೆಯೊಂದಿಗೆ ಸಮಾಜ ಸೇವೆಯ ದೀಕ್ಷೆ ತೊಟ್ಟು ನವ ಸಮಾಜದ ನಿಮರ್ಾಣಕ್ಕಾಗಿ ಹಂಬಲಿಸಿದ ಕ್ರಾಂತಿ ಪುರಷ. ಸರಳತೆ, ಭವಿಷ್ಯಜ್ಞಾನಗಳಿಂದ ಮಹಾ ಮಾನವತಾವದಿ ಎಂದು ಹೆಸರಾಗಿದ್ದರು. ಇಂತಹವರ ಆದರ್ಶಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಆಗ ಮಾತ್ರ ನವ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.
ಮುತೈದೆಯರ ಕಳಸದೊಂದಿಗೆ ಟ್ರ್ಯಾಕ್ಟರ್ನಲ್ಲಿ ಸ್ವಾಮಿಜಿಯವರ ಭಾವಚಿತ್ರದೊಂದಿಗೆ ಗ್ರಾಮದ ಪಾಂಡುರಂಗ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಈಶ್ವರ ದೇವಸ್ಥಾನದ ಹತ್ತಿರ ಸಮಾರೋಪಗೊಂಡಿತು.
ಈ ಸಂದರ್ಭದಲ್ಲಿ ಅಂಚೆ ವೆಂಕಟೇಶ್, ತಿಪ್ಪೇಸ್ವಾಮಿ, ಉಮೇಶ್, ಎರ್ರೆಪ್ಪ, ಜಡೇಪ್ಪ, ಜಗದೀಶ್, ಮೌಲಾ, ಪಾಂಡು, ಬಸವ, ಗಣೇಶ್, ರಾಮ, ರಾಜೇಶ್ವರಿ, ಮಹಾದೇವಿ ಹಾಗೂ ಇನ್ನಿತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 