ಅಕ್ಷತಾ ಕಾಂಬಳೆ ಎಂಎಸ್ಸಿ ಪರೀಕ್ಷೆಯಲ್ಲಿ ಕುವೆಂಪು ವಿವಿಗೆ ಪ್ರಥಮ ರಾ್ಯಂಕ್
Kuvempu University first rank in Akshata Kamble MSc examination
ಅಕ್ಷತಾ ಕಾಂಬಳೆ ಎಂಎಸ್ಸಿ ಪರೀಕ್ಷೆಯಲ್ಲಿ ಕುವೆಂಪು ವಿವಿಗೆ ಪ್ರಥಮ ರಾ್ಯಂಕ್
ಹಾರೂಗೇರಿ 24 : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಶ್ರೀಮತಿ ಅಕ್ಷತಾ ಸಿದರಾಯ ಕಾಂಬಳೆಯವರು ಪ್ರಾಣಿಶಾಸ್ತ್ರ ಎಂಎಸ್ಸಿ ವಿಭಾಗದಲ್ಲಿ ಪ್ರಥಮ ರಾ್ಯಂಕ್ನೊಂದಿಗೆ ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು.
ಅಕ್ಷತಾ ಕಾಂಬಳೆ ಅವರು ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ನಿರ್ದೇಶನಾಲಯದ 2022ರ ಪರೀಕ್ಷೆಯಲ್ಲಿ ಎಂಎಸ್ಸಿ ಪ್ರಾಣಿಶಾಸ್ತ್ರ ಪದವಿಯಲ್ಲಿ ಪ್ರಥಮ ರಾ್ಯಂಕ್ ಪಡೆದುಕೊಂಡಿದ್ದರು.
ಶ್ರೀಮತಿ ಅಕ್ಷತಾ ಸಿದರಾಯ ಕಾಂಬಳೆ ಅವರು ಸವದತ್ತಿ ತಾಲೂಕಿನ ಹೂಲಿ ಗ್ರಾಮದ ವಿಟಿಎಂಕೆ ಪ್ರೌಢಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ಸಿದರಾಯ ಕಾಂಬಳೆ ಅವರ ಪುತ್ರಿ. ಹೂಲಿ ಗ್ರಾಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿದ್ದು, ನಂತರ ಧಾರವಾಡದ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ನಂತರ ಪದವಿಯನ್ನು ಕಿಟಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದು, ಪ್ರಸ್ತುತ ಅಥಣಿ ತಾಲೂಕಿನ ಖವಟಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಈ ಸಾಧನೆಗೆ ಪ್ರಾಥಮಿಕ, ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ಪಿಯುಸಿ ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 