ಬಿ.ಈಡಿ ಕಾಲೇಜಿಗೆ ಎಲ್ಐಸಿ ಟೀಮ್ ಭೇಟಿ
LIC team visits B.Ed College
ಮುಧೋಳ 24: ಬಾಗಲಕೋಟ ಬಿವ್ಹಿವ್ಹಿ ಸಂಘದ ಮುಧೋಳದ ಎಸ್.ಆರ್.ಕಂಠಿ ಪದವಿ ಮಹಾವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ನೂತನವಾಗಿ ಆರಂಭವಾಗಲಿರುವ ದ್ವೀತಿಯ ಪಿಯುಸಿ ನಂತರದ ನಾಲ್ಕು ವರ್ಷದ ಸಂಯುಕ್ತ ಬಿ.ಈಡಿ ಕೋರ್ಸ್ (ಐಟಿಇಪಿ) ಗೆ ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯದ ಸ್ಥಳೀಯ (ಸ್ಥಾನಿಕ) ತನಿಖಾ ದಳದ ತಂಡವು (ಎಲ್ಐಸಿ) ಬುಧವಾರ ದಂದು ಭೇಟಿ ನೀಡಿತು.
ಬಾಗಲಕೋಟ ವಿಶ್ವವಿದ್ಯಾಲಯದ ಸ್ಥಳೀಯ (ಸ್ಥಾನಿಕ) ವಿಚಾರಣಾ ಸಮಿತಿಯ ಅಧ್ಯಕ್ಷ ಡಾ.ಮಹೇಶ ಚಿಂತಾಮಣಿ ಹಾಗೂ ಸದಸ್ಯ ಡಾ.ಯಂಕೋಭಾ ನಾರಾಯಣಪ್ಪ ಅವರು ಮಹಾವಿದ್ಯಾಲಯದ ಮೂಲಭೂತ ಸೌಕರ್ಯ ಮತ್ತು ಸೌಲಭ್ಯಗಳ ಕುರಿತು ಸಮಗ್ರವಾಗಿ ಪರೀಶೀಲನೆ ಮಾಡಿ, ಸಂಯೋಜನಗೆ ಒಳಪಡಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಜರಕುಂಟಿ ಅವರು ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಎಲ್ಐಸಿ ತಂಡಕ್ಕೆ ಒದಗಿಸಿದರು.
ಇದೇ ಸಂದರ್ಭದಲ್ಲಿ ಬಿವ್ಹಿವ್ಹಿ ಸಂಘದ ಆಡಳಿತ ಮಂಡಳಿಯ ಸದಸ್ಯ ಎಸ್.ಆರ್.ಮನಹಳ್ಳಿ ಹಾಗೂ ಬಾಗಲಕೋಟ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್.ಮುಗನೂರಮಠ ಅವರು ಆಡಳಿತ ಮಂಡಳಿಯ ಪ್ರತಿನಿಧಿಗಳಾಗಿ ಭಾಗವಹಿಸಿದ್ದರು. ಸಂಯುಕ್ತ ಬಿ.ಈಡಿ ಸಂಯೋಜಕರಾದ ಡಾ.ವ್ಹಿ.ಡಿ.ಹೂಲಗೇರಿ, ಡಾ.ಎಮ್.ಕೆ. ಗವಿಮಠ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 