ರಬಕವಿಯಲ್ಲಿ ಎಲ್ಪಿಜಿ ಪಂಚಾಯತ ಕಾರ್ಯಕ್ರಮ
LPG Panchayat Program at Rabkavi
ರಬಕವಿ-ಬನಹಟ್ಟಿ : ಮುಂಜಾಗ್ರತಾ ಕ್ರಮಗಳಿಂದ ಅಗ್ನಿಅವಘಡ ನಿಯಂತ್ರಿಸಲು ಸಾಧ್ಯಎಂದು ಮುಖ್ಯ ಗುರುಗಳಾದ ಪಿ. ಎಚ್. ಪ್ರತಾಪ್ ಸಲಹೆ ನೀಡಿದರು. ರಬಕವಿ ಹಳೇ ಬಸ್ ನಿಲ್ದಾಣದ ಬಳಿ ಇರುವರಬಕವಿ ಶಿಕ್ಷಣ ಸಂಸ್ಥೆಯ ಬಾಲಕಿಯರ ಶಾಲೆಯ ಆವರಣದಲ್ಲಿ ರಬಕವಿ-ಬನಹಟ್ಟಿ ಭಾರತ ಗ್ಯಾಸ ಸರ್ವಿಸ್ನವರು ಹಮ್ಮಿಕೊಂಡಿದ್ದ ಎಲ್ಪಿಜಿ ಪಂಚಾಯತ್ ಕಾರ್ಯಕ್ರಮದ ಅವರು ಭಾಗವಹಿಸಿ ಮಾತನಾಡಿದರು.
ಅಗ್ನಿಶಾಮಕ ಠಾಣಾ ಅಧಿಕಾರಿಗಳು ತೈಲ ಬೆಂಕಿ, ಗ್ಯಾಸ್ ಫೈರ್, ಎಲೆಕ್ಟ್ರಿಕಲ್ ಮತ್ತು ಮೆಟಲ್ ಫೈರ್ 4 ವಿಧದ ಬೆಂಕಿಯನ್ನು ಬೆಂಕಿಯ ತೀವ್ರತೆಯನ್ನು ಆಧರಿಸಿ ನಂದಿಸಬೇಕು. ನೀರಿನಿಂದತಣಿಸುವಿಕೆ, ಬೇರಿ್ಡಸುವಿಕೆ, ಮುಚ್ಚುವಿಕೆ. ಬೆಂಕಿಯನ್ನು ನಂದಿಸುವ ವಿಧಾನಗಳು. ಯಾವ ಬಗೆಯ ಬೆಂಕಿಗೆ ಯಾವುದನ್ನು ಬಳಸಬೇಕು ಎಂಬ ಮಾಹಿತಿ ಅಗತ್ಯಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ರಬಕವಿ-ಬನಹಟ್ಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕೆಲವು ಪ್ರಾತ್ಯಕ್ಷಿಕೆಗಳನ್ನು ಮಾಡುವ ಮೂಲಕ ಜನರಲ್ಲಿ ಅಗ್ನಿ ಅವಘಡಗಳ ಬಗ್ಗೆ ಅರಿವು ಮೂಡಿಸಿದರು. ಅಗ್ನಿ ಶಾಮಕ ಠಾಣೆಯ ಎಲ್ಲ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತ ಗ್ಯಾಸಿನ ವ್ಯವಸ್ಥಾಪಕರಾದ ಸಂಗಮೇಶ ಗುಣಕಿ, ಇತರ ಸಿಬ್ಬಂದಿ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 