ಜಮೀನು ಅತಿಕ್ರಮಣ ವಿವಾದ: ಓರ್ವನ ಕೊಲೆಯಲ್ಲಿ ಅಂತ್ಯ
Land encroachment dispute: ends in one's murder
ಜಮೀನು ಅತಿಕ್ರಮಣ ವಿವಾದ: ಓರ್ವನ ಕೊಲೆಯಲ್ಲಿ ಅಂತ್ಯ
ರಾಣೇಬೆನ್ನೂರ 07: ಜಮೀನಿನ ರಸ್ತೆ ಅತಿಕ್ರಮಣ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿರುವ ದುರಂತ ಘಟನೆ ತಾಲೂಕಿನ ಮಾಳನಾಯಕನಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ.ಗ್ರಾಮದ ಕರಬಸಪ್ಪ ಗೋವಿಂದಪ್ಪ ಪಾಟೀಲ (55) ಕೊಲೆಯಾದ ವ್ಯಕ್ತಿ.ಇದೇ ಗ್ರಾಮದ ವಸಂತ ಹನುಮಂತಪ್ಪ ಹಿರೇಬಿದರಿ, ಹೊಳಬಸಪ್ಪ ಹನುಮಂತಪ್ಪ ಹಿರೇಬಿದರಿ, ಮಧು ಸುರೇಶಪ್ಪ ಹಿತ್ತಲಮನಿ, ಪುಷ್ಪಾ ಸುರೇಶಪ್ಪ ಹಿತ್ತಲಮನಿ ಕೊಲೆ ಮಾಡಿರುವ ಆರೋಪಿಗಳಾಗಿದ್ದು, ಪೊಲೀಸರು ಪುಷ್ಪಾಳನ್ನು ಹೊರತು ಪಡಿಸಿ ಮೂವರನ್ನು ಬಂಧಿಸಿದ್ದಾರೆ.
ಬೆಳಗಿನ ಜಾವ ಕರಬಸಪ್ಪ ಜಮೀನಿಗೆ ಹೋದಾಗ ವಸಂತ ಎಂಬುವವರ ಜತೆ ಜಮೀನಿನಲ್ಲಿ ಕಲ್ಲುಗೂಟ ಹಾಕಿರುವ ವಿಚಾರಕ್ಕೆ ಜಗಳವಾಗಿದೆ. ಎರಡು ಕುಟುಂಬದವರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿದೆ. ಈ ಸಮಯದಲ್ಲಿ ಕರಬಸಪ್ಪನನ್ನು ಮೂವರು ಬಲವಾಗಿ ದೂಡಿದ್ದು ಆತ ಹಿಂಬದಿಯಿಂದ ಸಿಸಿ ರಸ್ತೆಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಸಾಗಿಸುತ್ತಿದ್ದ ಸಮಯದಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲಿಸಿದ್ದಾರೆ. ಕೊಲೆ ಆರೋಪಿಗಳಾದ ವಸಂತ ಸೇರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 