ತಟ್ಟೆ, ಚೀಲ ಸಂಗ್ರಹ ಅಭಿಯಾನಕ್ಕೆ ಚಾಲನೆ
Launch of plate, bag collection campaign
ತಟ್ಟೆ, ಚೀಲ ಸಂಗ್ರಹ ಅಭಿಯಾನಕ್ಕೆ ಚಾಲನೆ
ತಾಳಿಕೋಟಿ: ಉತ್ತರ ಪ್ರದೇಶದ ಇಲಾಹಾಬಾದ ಜಿಲ್ಲೆಯ ಪ್ರಯಾಗರಾಜನಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ಮಹಾ ಕುಂಭ ಮೇಳಕ್ಕೆ ಆಗಸುವ ಭಕ್ತಾದಿಗಳಿಗೆ ಅನುಕೂಲವಾಗಲು ಪಟ್ಟಣದ ನಾಗರೀಕರು ತಟ್ಟೆ ಚೀಲ ಹಾಗೂ ಕಾಣಿಕೆ ಸಂಗ್ರಹ ಅಭಿಯಾನ ಬುಧವಾರ ಆರಂಭಿಸಿದರು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಚಾಲಕ ಮಲ್ಲಿಕಾರ್ಜುನ ಹಿಪ್ಪರಗಿಯವರು ಇಡೀ ಜಿಲ್ಲೆಯಾದ್ಯಂತ ಈ ಅಭಿಯಾನವು ನಡೆಯುತ್ತಿದೆ ತಾಳಿಕೋಟಿ ಪಟ್ಟಣದಲ್ಲಿಯೂ ನಾವು ಮನೆಮನೆಗೆ ತೆರಳಿ ಸುಮಾರು ಮೂರು ಸಾವಿರ ಊಟದ ತಟ್ಟೆ, ಲೋಟ, ಕೈಚೀಲ ಹಾಗೂ ಕಾಣಿಕೆಯನ್ನು ಸಂಗ್ರಹಿಸುತ್ತಿದ್ದೇವೆ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು. ಈ ಸಮಯದಲ್ಲಿ ಪುರಸಭೆ ಸದಸ್ಯರಾದ ವಾಸುದೇವ ಹೆಬಸೂರ, ಜಯಸಿಂಗ್ ಮೂಲಿಮನಿ, ರಾಜು ಹಂಚಾಟೆ, ರಾಜು ಸೊಂಡೂರ,ಬಂಡು ಧಾಯಪುಲೆ, ಶ್ರೀಧರ್ ದೇಶಪಾಂಡೆ, ಪದ್ಮರಾಜ ಅಗ್ರವಾಲ, ಪ್ರಮೋದ ಅಗಾರವಾಲ ಮುತ್ತೀತರರೂ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 