ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Launch of the annual sports event
ಯಮಕನಮರಡಿ, 20 : ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀ.ಎಸ್.ಎ.ರಾಮನಕಟ್ಟಿ ವಹಿಸಿ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯಂತ ಸಹಾಯಕವಾಗಿದೆ. ಉತ್ತಮ ಆಹಾರವನ್ನು ಸೇವಿಸುತ್ತ ಉತ್ತಮ ದೇಹ ಹಾಗೂ ಆರೋಗ್ಯ ಕಾಯ್ದುಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಅತಿಥಿಗಳು ಹಾಗೂ ಕಾಲೇಜಿನ ಕ್ರೀಡಾ ವ್ಯವಸ್ಥಾಪಕರಾದ ಶ್ರೀ.ಬಿ.ಬಿಕೊಡ್ಲಿ ಮಾತನಾಡಿ ಇಂದು ಭಾರತದಲ್ಲಿ ಕ್ರೀಡೆಗೆ ಅತೀ ಮಹತ್ವವಿದ್ದು ಸರ್ಕಾರವು ಕ್ರೀಡಾ ಪಟುಗಳಿಗೆ ಹಲವಾರು ಸೌಲಭ್ಯ ನೀಡುತ್ತಿದೆ. ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಮೀಸಲಾತಿ ಸೌಲಭ್ಯವಿದೆ ಎಂದು ತಿಳಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿ ಕ್ರೀಡಾ ಮನೋಭಾವನೆಯಿಂದ ಆಟ ಆಡಿ ಕ್ರೀಡಾಕೂಟಗಳನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ನಂತರ ಪ್ರಾಂಶುಪಾಲರು ಕ್ರೀಡಾ ಜ್ಯೋತಿ ಪ್ರಜ್ವಲಿಸಿ ಜ್ಯೋತಿ ಸಂಚಾರದ ನಂತರ ಕ್ರೀಡಾಜ್ಯೋತಿಯನ್ನು ಸ್ವಾಗತಿಸಿ ಚಾಲನೆ ನೀಡಿದರು.ಎಸ್.ಆರ್.ತಬರಿ ಕಾರ್ಯಕ್ರಮವನ್ನು ನಿರೂಪಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 