ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Launch of the annual sports event
ಯಮಕನಮರಡಿ, 20 : ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀ.ಎಸ್.ಎ.ರಾಮನಕಟ್ಟಿ ವಹಿಸಿ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯಂತ ಸಹಾಯಕವಾಗಿದೆ. ಉತ್ತಮ ಆಹಾರವನ್ನು ಸೇವಿಸುತ್ತ ಉತ್ತಮ ದೇಹ ಹಾಗೂ ಆರೋಗ್ಯ ಕಾಯ್ದುಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಅತಿಥಿಗಳು ಹಾಗೂ ಕಾಲೇಜಿನ ಕ್ರೀಡಾ ವ್ಯವಸ್ಥಾಪಕರಾದ ಶ್ರೀ.ಬಿ.ಬಿಕೊಡ್ಲಿ ಮಾತನಾಡಿ ಇಂದು ಭಾರತದಲ್ಲಿ ಕ್ರೀಡೆಗೆ ಅತೀ ಮಹತ್ವವಿದ್ದು ಸರ್ಕಾರವು ಕ್ರೀಡಾ ಪಟುಗಳಿಗೆ ಹಲವಾರು ಸೌಲಭ್ಯ ನೀಡುತ್ತಿದೆ. ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಮೀಸಲಾತಿ ಸೌಲಭ್ಯವಿದೆ ಎಂದು ತಿಳಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿ ಕ್ರೀಡಾ ಮನೋಭಾವನೆಯಿಂದ ಆಟ ಆಡಿ ಕ್ರೀಡಾಕೂಟಗಳನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ನಂತರ ಪ್ರಾಂಶುಪಾಲರು ಕ್ರೀಡಾ ಜ್ಯೋತಿ ಪ್ರಜ್ವಲಿಸಿ ಜ್ಯೋತಿ ಸಂಚಾರದ ನಂತರ ಕ್ರೀಡಾಜ್ಯೋತಿಯನ್ನು ಸ್ವಾಗತಿಸಿ ಚಾಲನೆ ನೀಡಿದರು.ಎಸ್.ಆರ್.ತಬರಿ ಕಾರ್ಯಕ್ರಮವನ್ನು ನಿರೂಪಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 