ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Launch of the annual sports event
ಯಮಕನಮರಡಿ, 20 : ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀ.ಎಸ್.ಎ.ರಾಮನಕಟ್ಟಿ ವಹಿಸಿ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯಂತ ಸಹಾಯಕವಾಗಿದೆ. ಉತ್ತಮ ಆಹಾರವನ್ನು ಸೇವಿಸುತ್ತ ಉತ್ತಮ ದೇಹ ಹಾಗೂ ಆರೋಗ್ಯ ಕಾಯ್ದುಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಅತಿಥಿಗಳು ಹಾಗೂ ಕಾಲೇಜಿನ ಕ್ರೀಡಾ ವ್ಯವಸ್ಥಾಪಕರಾದ ಶ್ರೀ.ಬಿ.ಬಿಕೊಡ್ಲಿ ಮಾತನಾಡಿ ಇಂದು ಭಾರತದಲ್ಲಿ ಕ್ರೀಡೆಗೆ ಅತೀ ಮಹತ್ವವಿದ್ದು ಸರ್ಕಾರವು ಕ್ರೀಡಾ ಪಟುಗಳಿಗೆ ಹಲವಾರು ಸೌಲಭ್ಯ ನೀಡುತ್ತಿದೆ. ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಮೀಸಲಾತಿ ಸೌಲಭ್ಯವಿದೆ ಎಂದು ತಿಳಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿ ಕ್ರೀಡಾ ಮನೋಭಾವನೆಯಿಂದ ಆಟ ಆಡಿ ಕ್ರೀಡಾಕೂಟಗಳನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ನಂತರ ಪ್ರಾಂಶುಪಾಲರು ಕ್ರೀಡಾ ಜ್ಯೋತಿ ಪ್ರಜ್ವಲಿಸಿ ಜ್ಯೋತಿ ಸಂಚಾರದ ನಂತರ ಕ್ರೀಡಾಜ್ಯೋತಿಯನ್ನು ಸ್ವಾಗತಿಸಿ ಚಾಲನೆ ನೀಡಿದರು.ಎಸ್.ಆರ್.ತಬರಿ ಕಾರ್ಯಕ್ರಮವನ್ನು ನಿರೂಪಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 