ಕಾನೂನು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬಹಳಷ್ಟು ಅವಕಾಶಗಳಿವೆ; ಜಿಲ್ಲಾಧಿಕಾರಿ
Law students have many opportunities in the future: District Magistrate
ಕೊಪ್ಪಳ 18: ಕಾನೂನು ವಿದ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳಿವೆ. ಜೀವನದಲ್ಲಿ ಅವುಗಳನ್ನು ಸದುಪಯೋಗಪಡಿಸಿಕೊಂಡು ಮುನ್ನಡೆಯಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು. ಕೊಪ್ಪಳದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಅಂಗಸಂಸ್ಥೆ ಕೊಪ್ಪಳದ ಭಾರತರತ್ನ ಅಟಲ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ಶುಭೋತ್ಸವ 2025- ವಿದ್ಯಾರ್ಥಿಗಳ ಕಾರ್ಯಚಟುವಟಿಕೆಗಳ ಫ್ರೆಶರ್ಸಡೆ ಕಾರ್ಯಕ್ರಮದಲ್ಲಿ ಗಣ್ಯಮಾನ್ಯರೊಂದಿಗೆ ಭಾಗವಹಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮಾಜಿ ಮಹಾಪೌರರು ಸಭಾನಾಯಕರಾದ ಈರೇಶ ಅಂಚಟಗೇರಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ ಸುರೇಶ ಇಟ್ನಾಳ ಅವರು ಭಾರತ ಸರ್ಕಾರ ನೂತನ ನ್ಯಾಯ ಸಂಹಿತೆಯನ್ನ ಅಳವಡಿಸಿದ್ದು ವಿದ್ಯಾರ್ಥಿಗಳು ನೂತನವಾಗಿ ಅಳವಡಿಸಿದ ಎಲ್ಲ ಕಾನೂನು ಪಠ್ಯವನ್ನು ಅಧ್ಯಯನ ಮಾಡಬೇಕು. ಮುಂಬರುವ ದಿನಮಾನಗಳಲ್ಲಿ ಪ್ರಸ್ತುತ ನೀತಿ ಸಂಹಿತೆಗಳಿಂದ ಕಾನೂನು ಪ್ರಕ್ರಿಯೆಗಳು ಜರುಗುವವು. ಕಾನೂನು ವೃತ್ತಿಯನ್ನಾಗಿ ಆಯ್ಕೆಮಾಡಿಕೊಂಡ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬಹಳಷ್ಟು ಅವಕಾಶಗಳಿರುತ್ತವೆ.
ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಖ ಓ ಪರಾಂಡೆ, ಸಿಂಡಿಕೇಟ ಸದಸ್ಯರಾದ ಕಾನೂನು ವಿಶ್ವ ವಿದ್ಯಾಲಯ, ಶ್ರೀಶೈಲ ಯಕ್ಕುಂಡಿಮಠ, ಎಸ್.ರಾಧಾಕೃಷ್ಣನ್, ಬಸವರಾಜ ವಸ್ತ್ರದ , ಉಷಾದೇವಿ ಹಿರೇಮಠ, ಬಸವರಾಜ ಎಸ ಎಮ, ವಿದ್ಯಾರ್ಥಿಗಳು ಶಿಕ್ಷಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 