ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿರ್ದೇಶಕರಾಗಿ ವಕೀಲ ದಿನೇಶ ಪಾಟೀಲ ನೇಮಕ
Lawyer Dinesh Patil appointed as Director of Veerashaiva Lingayat Development Corporation
ಬೆಳಗಾವಿ 31: ಈ ಭಾಗದ ಖ್ಯಾತ ಹಿರಿಯ ವಕೀಲರಾದ ದಿನೇಶ ಎಂ. ಪಾಟೀಲ, ಬೆಳಗಾವಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಕರ್ನಾಟಕ ಸರ್ಕಾರ ಇತ್ತೀಚೆಗೆ ನೇಮಕ ಮಾಡಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅವರ ಶೈಕ್ಷಣಿಕ ಸಾಧನೆ, ವೃತ್ತಿಪರ ಕೊಡುಗೆ, ಸಮಾಜ ಸೇವೆ, ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಹಾಗೂ ಅವರ ಬಹುಮುಖ ವ್ಯಕ್ತಿತ್ವವನ್ನು ಪರಿಗಣಿಸಿ ಈ ನೇಮಕಾತಿ ಮಾಡಲಾಗಿದೆ. ಜಗದ್ಗುರು ಪಂಚಮ ಡಾ. ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಿದ್ಧಸಂಸ್ಥಾನಮಠ ನಿಡಸೋಸಿ ಇಂದು ಶ್ರೀಮಠದಲ್ಲಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು. ಇದು ಈ ಭಾಗದ ವೀರಶೈವ ಲಿಂಗಾಯತ ಸಮಾಜದ ಕಾನೂನು ತಜ್ಞರೊಬ್ಬರಿಗೆ ಸರ್ಕಾರ ನೀಡಿದ ಬಹುದೊಡ್ಡ ಜವಾಬ್ದಾರಿಯಾಗಿದೆ ಎಂದು ಶ್ರೀಗಳು ಶ್ಲಾಘಿಸಿದರು. ಇಂಜೀನೀಯರಿಂಗ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಸಿ.ಕಮತೆ ಹಾಗೂ ಶ್ರೀಮಠದ ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 