ಕಲಾಪ ಬಹಿಷ್ಕರಿಸಿ ರೈತ ಹೋರಾಟಕ್ಕೆ ನ್ಯಾಯವಾದಿಗಳ ಬೆಂಬಲ
Lawyers support farmers' struggle by boycotting proceedings
ಇಂಡಿ 05: ತಾಲ್ಲೂಕಿನ ಹೃದಯ ಭಾಗದಲ್ಲಿರುವ ಶ್ರೀ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಹಸಿರು ಸೇನೆ ವತಿಯಿಂದ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಆಗುವರಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ.ಈ ಹೋರಾಟಕ್ಕೆ ಬೆಂಬಲ ಸೂಚಿಸಿದ ಇಂಡಿ ತಾಲೂಕು ನ್ಯಾಯವಾದಿ ಸಂಘದ ವತಿಯಿಂದ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಇಂಡಿ ಕೊರ್ಟ್ ಆವರಣದಿಂದ ರೈತ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ ಕೂಗೂತ್ತಾ ಶ್ರೀ ಬಸವೇಶ್ವರ ವೃತ್ತದ ಬಳಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಸಿದ್ದಣ್ಣ ಬೂದಿಹಾಳ ಅವರು ರೈತರು ಮಾಡುತ್ತಿರುವ ಹೋರಾಟ ನ್ಯಾಯಯುತವಾಗಿ ಈ ಹೋರಾಟಕ್ಕೆ ನಮ್ಮ ಇಂಡಿ ತಾಲ್ಲೂಕಿನ ಎಲ್ಲಾ ನ್ಯಾಯವಾದಿಗಳ ಸಂಪೂರ್ಣ ಬೆಂಬಲ ಇದೆ, ನೀವು ನಿಮಗೆ ನ್ಯಾಯ ಸಿಗುವರಿಗೆ ನಾವು ರೈತರ ಪರವಾಗಿ ಇರುತ್ತೆವೆ, ಈ ಹೋರಾಟದಲ್ಲಿ ರೈತರ ಮೇಲೆ ಏನಾದರೂ ಕೇಸ್ ದಾಖಲಾದರೆ ಆ ಕೇಸನ್ನು ಉಚಿತವಾಗಿ ಕೋರ್ಟ್ ನಲ್ಲಿ ವಾದ ಮಾಡಿ ರೈತರಿಗೆ ನ್ಯಾಯ ಕೊಡುಸುತ್ತೆವೆ ಎಂದು ಹೇಳಿದರು ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಎಮ್ ಎಮ್ ಬಿರಾದಾರ ಎನ್ ಕೆ ನಾಡಪುರೋಹಿತ ಎಸ್ ಎಸ್ ರೇಬಿನಾಳ ಎಸ್ ಎಲ್ ನಿಂಬರಗಿಮಠ ಎ ಜೆ ಧನಶೇಟ್ಟಿ ಡಿ ಜಿ ಜೊತಗೊಂಡ ಎಸ್ ಆರ್ ಮುಜಗೊಂಡ ಬಿ ಬಿ ಬಿರಾದಾರ ಎಸ್ ಆರ್ ಬಿರಾದಾರ ವಾಯ್ ಎಸ್ ಪೂಜಾರಿ ಎಂ ಎಸ್ ಬೋಸಗಿ ಎಸ್ ಕೆ ರಾಠೋಡ ಎಮ್ ಎಸ್ ಪಾಟೀಲ ಜಿ ಎಸ್ ಪಾಟೀಲ ಪಿ ಬಿ ಪಾಟೀಲ ಎ ಎ ಗಜಾಕೋಶ ಜೆ ಬಿ ಬೇನೂರ ಟಿ ವಾಯ್ ಮೆಂಡೇಗಾರ ಎಂ ಜಿ ಗಾಯಕವಾಡ ಅನೀಲ ಜೋಶಿ ರಮೇಶ್ ಕೊಳಿ ವಿ ಎಸ್ ಚಲವಾದಿ ಎಸ್ ಕೆ ತಮ್ಮಶೇಟ್ಟಿ ಎಮ್ ಎಸ್ ತೇಲಿ ಎ ಎಸ್ ಕೊಟ್ಟಲಿಗಿ ಎಸ್ ಬಿ ಗಿಡಗಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 